ಮೇ 15 ರಂದು ʼಗಿಡಿಕೆರೆ ರಾಮಕ್ಕ; ಒಂಜಿ ಚಿರನೆಂಪುʼ ಕಾರ್ಯಕ್ರಮ

Upayuktha
0


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠ, ಶ್ರೀ ಸಂಸ್ಥಾನ ಒಡಿಯೂರು ತುಳು ಅಧ್ಯಯನ ಕೇಂದ್ರ, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಮಂಗಳೂರು ಈ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ "ಪಾಡ್ದನದ ಪೆರಿಯಕ್ಕ ಗಿಡಿಕೆರೆ ರಾಮಕ್ಕ; ಒಂಜಿ ಚಿರನೆಂಪು" ಎಂಬ ಕಾರ್ಯಕ್ರಮ ಬುಧವಾರ ಸಂಜೆ ಗಂಟೆ 5:30 ಕ್ಕೆ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿನ ಶಿವರಾಮ ಕಾರಂತ ಸಭಾಭವನದಲ್ಲಿ ನಡೆಯಲಿದೆ.


ಇತ್ತೀಚೆಗೆ ನಿಧನರಾದ ಪಾಡ್ದನ ಕವಿ ಗಿಡಿಕೆರೆ ರಾಮಕ್ಕ ಅವರ ಕುರಿತು ಹಿರಿಯ ಕನ್ನಡ-ತುಳು ವಿದ್ವಾಂಸ ಪ್ರೊಫೆಸರ್ ಎ.ವಿ. ನಾವಡ ಸಂಸ್ಮರಣಾ ನುಡಿಗಳನ್ನಾಡಲಿದ್ದಾರೆ, ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ಮತ್ತು ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕ ಡಾ.ಮಾಧವ ಎಂ.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top