ಮೈಸೂರು: ಪ್ರತಿವರ್ಷ ವಿವಿಧ ಭಾಗಗಳ ಸಮಾಜಕಾರ್ಯ ವಿದ್ಯಾರ್ಥಿಗಳು ಹಾಡಿಯಲ್ಲಿ ಶಿಬಿರವನ್ನು ಹಮ್ಮಿಕೊಳ್ಳುತ್ತಿರುವುದೇ ಹಾಡಿಗೆ ಹೆಮ್ಮೆಯ ವಿಚಾರ . ಬುಡಕಟ್ಟು ಜನರ ಆಚಾರ - ವಿಚಾರ ಜೀವನ ವಿಧಾನಗಳನ್ನು ತಿಳಿದು , ಸಮುದಾಯದ ಬದಲಾವಣೆಯೇ ಸಮಾಜಕಾರ್ಯ ವಿಭಾಗ ಶಿಬಿರದ ಮುಖ್ಯ ಗುರಿಯಾಗಬೇಕೆಂದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಸವನಗಿರಿ ಸರ್ಕಾರಿ ಬುಡಕಟ್ಟು ವಾಲ್ಮೀಕಿ ಆಶ್ರಮ ಶಾಲೆ ಎಸ್.ಡಿ.ಎಂ.ಸಿ. ಅಧ್ಯಕ್ಷ ಸುರೇಂದ್ರ ಅಭಿಪ್ರಾಯಪಟ್ಟರು.
ಮಂಗಳೂರು ವಿಶ್ವವಿದ್ಯಾನಿಲಯ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮಂಗಳಗಂಗೋತ್ರಿ ಕೊಣಾಜೆ ಇವರ ಸಮಾಜಕಾರ್ಯ ಗ್ರಾಮೀಣ ಅಧ್ಯಯನ ಶಿಬಿರದ ಉದ್ಘಾಟನಾ ಸಮಾರಂಭವನ್ನು "ಕಡಲ ಮಕ್ಕಳ ಚಿತ್ತ ಹಾಡಿಯತ್ತ" ಶೀರ್ಷಿಕೆಯಡಿಯಲ್ಲಿ ಬಸವನಗಿರಿ ಹಾಡಿಯ ಸರ್ಕಾರಿ ಬುಡಕಟ್ಟು ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಸಂಜೆ ಹಮ್ಮಿಕೊಳ್ಳಲಾಯಿತು.
ಅಧ್ಯಕ್ಷೀಯ ನುಡಿಗಳನ್ನಾಡಿದ ವಿಭಾಗದ ಮುಖ್ಯಸ್ಥ ಡಾ.ಮೋಹನ್ ಸಿಂಗೇ ಗ್ರಾಮೀಣ ಶಿಬಿರವು ವಿಧ್ಯಾರ್ಥಿಗಳ ಪಠ್ಯದ ಕಲಿಕೆಗೆ ಮಾತ್ರ ಸೀಮಿತವಾಗದೇ ಇದರಿಂದ ಸಮುದಾಯದ ಸಮಸ್ಯೆಗಳು ಎದುರು ಬರಬೇಕು . ಶಿಬಿರದ ನಂತರ ಗ್ರಾಮೀಣ ಜನರ ಹೃದಯವಂತಿಕೆ ವಿದ್ಯಾರ್ಥಿಗಳ ಜೀವನದ ಪಾಲಾದಲ್ಲಿ ಶಿಬಿರವು ಯಶಸ್ವಿ ಕಂಡಂತೆ ಎಂದು ಅಭಿಪ್ರಾಯಪಟ್ಟರು.
ಪ್ರಾಸ್ತಾವಿಕ ಮಾತುಗಳನ್ನಾಡಿದ ವಿಭಾಗದ ಅತಿಥಿ ಉಪನ್ಯಾಸಕಿ ಡಾ.ಉಷಾರಾಣಿ ಬುಡಕಟ್ಟು ಜನರ ಸಂಸ್ಕೃತಿ ಅಧ್ಯಯನವೇ ಶಿಬಿರದ ಮುಖ್ಯ ಉದ್ದೇಶ . ವಿದ್ಯಾರ್ಥಿಗಳ ಕಲಿಯುವಿಕೆಗೆ ಸಪ್ತ ದಿನಗಳ ಕಾಲ ಹಾಡಿ ಜನರ ಪ್ರೋತ್ಸಾಹ ಅತ್ಯಗತ್ಯ ಎಂದರು.
ಹಾಡಿಯಲ್ಲಿನ ವಾಲ್ಮೀಕಿ ಆಶ್ರಮ ಶಾಲೆಯು ಹಲವು ಬಡ ವಿದ್ಯಾರ್ಥಿಗಳಿಗೆ ಪ್ರಾಥಮಿಕ ವಿದ್ಯಾಭ್ಯಾಸವನ್ನು ನೀಡಿದೆ. ಆದರೆ ಹಾಡಿಯಲ್ಲಿ ಗುಣಮಟ್ಟ ಶಿಕ್ಷಣದ ಕೊರತೆ ಇದ್ದು , ಇದರ ಕುರಿತು ಸಮಾಜಕಾರ್ಯ ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕೆಂದು ರೈತ ಉತ್ಪಾದನಾ ಕೇಂದ್ರ , ಎಫ್.ಪಿ.ಓ. ಅಧ್ಯಕ್ಷ ಕಾಳ ಕಲ್ಕಾರ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲ ಬಿ.ಕೆ.ನಂಜಯ್ಯ , ಚಕ್ಕೋಡನಹಳ್ಳಿ ಗ್ರಾಮ ಪಂಚಾಯತ್ ಅದ್ಯಕ್ಷೆ ರಾಜೇಶ್ವರಿ ,ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀ ರವಿ , ಬಸವನಗಿರಿ ಹಾಡಿ ಯಜಮಾನ ವಿಠ್ಠಲ್ ನಣಚಿ , ಮಂಗಳೂರು ವಿ.ವಿ. ಸಮಾಜಕಾರ್ಯ ವಿಭಾಗದ ಉಪನ್ಯಾಸಕ ಡಾ.ಶರತ್ , ಸಂಶೋಧನಾ ವಿದ್ಯಾರ್ಥಿ ಪ್ರಜ್ವಲ್ ಹಾಗೂ ವಿ.ವಿ.ಯ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಭಾಗದ ವಿದ್ಯಾರ್ಥಿನಿ ಹರ್ಷಿತಾ ಅತಿಥಿಗಳನ್ನು ಸ್ವಾಗತಿಸಿ, ವಿದ್ಯಾರ್ಥಿನಿ ಕೀರ್ತನ ವಂದಿಸಿದರು. ವಿದ್ಯಾರ್ಥಿ ನಿಶಾಂತ್ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ