ನಿಟ್ಟೆ: ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಘಟಕದಿಂದ ವಿಕಸಿತ ಭಾರತ – 2047 ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು, ಈ ಕಾರ್ಯಕ್ರಮದಲ್ಲಿ ಖ್ಯಾತ ಅಂಕಣಕಾರರಾದ ಶ್ರೀ ಶ್ರೀಕಾಂತ ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಉಪನ್ಯಾಸವನ್ನು ನೆರವೇರಿಸಿದರು.
ಭಾರತ ಸರ್ಕಾರ ಕೈಗೊಂಡಿರುವ ಅನೇಕ ಕಾರ್ಯಕ್ರಮಗಳು ಇಂದು ಭಾರತವನ್ನು ಅಭಿವೃದ್ದಿಯ ಪಥದತ್ತ ಸಾಗಿಸುತ್ತಿದೆ, ಹಾಗೂ ಈ ಯೋಜನೆಗಳು ಜಾಗತಿಕವಾಗಿ ಪ್ರಶಂಸೆಗೆ ಪಾತ್ರವಾಗಿವೆ ಎಂದರು. ಗಂಗಾ ನದಿಯನ್ನು ಶುದ್ದ ಗೊಳಿಸುವ ನಮಾಮಿ ಗಂಗೆ ಯೋಜನೆ, ಇದರಿಂದಾಗಿ ಇಂದು ಗಂಗೆಯಲ್ಲಿನ ಪಿಎಸ್ ಮಟ್ಟ ಇವತ್ತು 3 ಕ್ಕೆ ಇಳಿದಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆ ಯೋಜನೆಗಳು ದೇಶದಾದ್ಯಂತ ಸಂಪರ್ಕ ಕ್ರಾಂತಿಯನ್ನು ಉಂಟುಮಾಡಿದೆ, ಭಾರತಿಯ ಸೇನೆಯ ಸರ್ಜಿಕಲ್ ಸ್ಟ್ರೈಕ್, ಇವ್ಯಾಕ್ಯುಯೇಷನ್ ಗಳು ಭದ್ರತೆಯ ಹೊಸ ಸವಾಲುಗಳಿಗೆ ಉತ್ತರಗಳನ್ನು ನೀಡಿದೆ. ಹಾಗೆಯೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಚಂದ್ರಯಾನ ಯಶಸ್ಸುಗಳು ಕೂಡ ಜಗತ್ತು ಭಾರತದತ್ತ ತಿರುಗುವಂತೆ ಮಾಡಿದೆ ಎಂದರು. ಭಾರತ ಈ ರೀತಿ ಅನೇಕ ರಂಗದಲ್ಲಿ ಅಭಿವೃದ್ದಿಯನ್ನು ಸಾಧಿಸುತ್ತಿದ್ದು ಇದು ಜಗತ್ತಿನಲ್ಲಿ ಭಾರತ ಪ್ರಾಬಲ್ಯ ಸಾಧಿಸಬಾರದು ಭಾರತವು ಪ್ರೇರೇಪಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ವೀಣಾ ಕುಮಾರಿ ಬಿ.ಕೆ. ಇವರು ಮಾತನಾಡಿ, ಹೋರಾಟ ಕೇವಲ ಸ್ವಾತಂತ್ರ್ಯಕ್ಕಾಗಿ ಮಾತ್ರವಲ್ಲ, ಅಭಿವೃದ್ದಿಗಾಗಿಯೂ ನಾವು ಹೋರಾಟದ ಮನೋಭಾವವನ್ನು ರೂಢಿಸಿಕೊಳ್ಳಬೇಕು, ಯುವಜನತೆ ತಮ್ಮ ಅಭ್ಯುದಯದ ಜೊತೆಗೆ ದೇಶದ ಹಿತಕ್ಕಾಗಿ ಕೂಡ ಯೋಚಿಸುವುದನ್ನು ಕಲಿಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಂತಮ ವರ್ಷದ ವಿದ್ಯಾರ್ಥಿಗಳು, ಅಧ್ಯಾಪಕರು ಉಪಸ್ಥಿತರಿದ್ದರು ಉಪನ್ಯಾಸಕ ನಾಯಕ್ ಚಿನ್ಮಯ್ ಸದಾನಂದ ಸ್ವಾಗತಿಸಿದರು, ಉಪನ್ಯಾಸಕಿ ಕುಮಾರಿ ದೃಷ್ಟಿ ವಿ ಬಾಳಿಗ ವಂದಿಸಿದರು, ವಿದ್ಯಾರ್ಥಿನಿ ಕುಮಾರಿ ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ