ಸುರತ್ಕಲ್: ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲವಿದ್ದರೆ ಯಾವುದೂ ಅಸಾಧ್ಯವಲ್ಲ. ಶ್ರದ್ಧೆ ಮತ್ತು ಏಕಾಗ್ರತೆಯೊಂದಿಗೆ ಕಲಿಕೆಯಲ್ಲಿ ತೊಡಗಿಸಿಕೊಂಡು ವಿಶ್ವವಿದ್ಯಾನಿಯಲದ ಪರೀಕ್ಷೆಗಳಲ್ಲಿ ರ್ಯಾಂಕ್ ಗಳಿಸಿದ ವಿದ್ಯಾರ್ಥಿನಿಯರು ಎಲ್ಲಾ ವಿದ್ಯಾರ್ಥಿಗಳಿಗೆ ಮಾದರಿ ಎಂದು ಗೋವಿಂದ ದಾಸ ಕಾಲೇಜು, ಸುರತ್ಕಲ್ನ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ ಪಿ. ನುಡಿದರು.
ಅವರು ಜುಲೈ 2023ರಲ್ಲಿ ನಡೆದ ಮಂಗಳೂರು ವಿ.ವಿಯ ಪದವಿ ಪರೀಕ್ಷೆಯಲ್ಲಿ ಬಿ.ಸಿ.ಎ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಗಳಿಸಿದ ವರ್ಷಿಣಿ ಮತ್ತು ಬಿ.ಕಾಂ. ವಿಭಾಗದಲ್ಲಿ 6ನೇ ರ್ಯಾಂಕ್ ಪಡೆದ ಮೇಘ ಎನ್. ಶೆಟ್ಟಿಯವರನ್ನು ಅಭಿನಂದಿಸಿ ಮಾತನಾಡಿದರು.
ಉಪ ಪ್ರಾಂಶುಪಾಲ ಪ್ರೊ. ನೀಲಪ್ಪ ವಿ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ಸೌಮ್ಯ ಪ್ರವೀಣ್ ಕೆ., ಐಶೆ ಸಂಯೋಜಕ ಪ್ರೊ. ವಾಮನ ಕಾಮತ್, ಬಿ.ಸಿ.ಎ ವಿಭಾಗದ ಮುಖ್ಯಸ್ಥೆ ಗೀತಾ ಕೆ., ಉಪನ್ಯಾಸಕಿಯರಾದ ಶೈಲಜಾ ಹೆಚ್., ವೀಣಾ ಕೆ. ಮತ್ತು ಪೂರ್ಣಿಮಾ ಗೋಖಲೆ, ಬಿ.ಕಾಂ ವಿಭಾಗದ ಉಪನ್ಯಾಸಕರಾದ ಡಾ. ಭಾಗ್ಯಲಕ್ಷ್ಮಿ, ಧನ್ಯ ಕುಮಾರ್ ವೆಂಕಣ್ಣವರ್, ಶ್ರೀದೇವಿ, ಪುನೀತ, ಪ್ರತೀಕ್ಷ ಮತ್ತು ಕಛೇರಿ ಅಧೀಕ್ಷಕ ವೆಂಕಪ್ಪ ಮೂಲ್ಯ ಎಂ. ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ