ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ವಿವೇಕ ಸಂಕಲ್ಪ– 2024: ಪೋಷಕರ ಸಮಾವೇಶ, ಕಾಲೇಜು ಪ್ರಾರಂಭೋತ್ಸವ

Upayuktha
1 minute read
0

 


ಪುತ್ತೂರು: 2024-25 ನೇ ಸಾಲಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳ ವಿದಾರ್ಥಿ- ಪೋಷಕರ ಸಮಾವೇಶ ʼವಿವೇಕ ಸಂಕಲ್ಪ – 2024ʼ ಎಂಬ ಶೀರ್ಷಿಕೆಯೊಂದಿಗೆ  ಮೇ 30 ರಂದು ಬೆಳಗ್ಗೆ 9 ಕ್ಕೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆವರಣದ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದೆ. ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ. ಪಿ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಖ್ಯಾತ ಮನೋವೈದ್ಯರು ಹಾಗೂ ಲೇಖಕ ಡಾ. ವಿರೂಪಾಕ್ಷ ದೇವರಮನೆ ಅವರು ಭಾಗವಹಿಸಿ ಪೋಷಕರಿಗೆ ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ.


ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ  ಗೋಪಾಲಕೃಷ್ಣ ಭಟ್‌ ಹಾಗೂ ಕಾಲೇಜಿನ ಪ್ರಾಂಶುಪಾಲ  ಮಹೇಶ್‌ ನಿಟಿಲಾಪುರ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರು, ಪೋಷಕರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯರ‍್ಥಿಗಳು ಭಾಗವಹಿಸಲಿದ್ದಾರೆ. ಈ ದಿನ ವಿದ್ಯಾರ್ಥಿಗಳಿಗೆ ‌ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ ನಡೆಯಲಿದ್ದು, ಮೇ 31 ರಿಂದ ತರಗತಿಗಳು ಪ್ರಾರಂಭವಾಗಲಿದೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top