550 ಕೋಟಿ ಮಂತ್ರ ಜಪದ ಗುರಿ
ಮಂಗಳೂರು: ಶ್ರೀ ಸಂಸ್ಥಾನ ಗೋಕರ್ಣ ಪರ್ಥಗಾಳಿ ಜೀವೋತ್ತಮ ಮಠದ 550 ವರ್ಷದ ಪರ್ವ ಕಾಲದ ಸಂಭ್ರಮದ ಅಂಗವಾಗಿ ಅಕ್ಟೋಬರ್ 18, 2025 ರೊಳಗೆ 550 ಕೋಟಿ ರಾಮ ನಾಮ ತಾರಕ ಮಂತ್ರ ಜಪಿಸುವ ಗುರಿ ಹೊಂದಲಾಗಿದೆ. ಇದುವರೆಗೆ 34 ದಿನಗಳಲ್ಲಿ 80 ಲಕ್ಷ ರಾಮ ತಾರಕ ಮಂತ್ರ ಜಪ ಮಾಡಲಾಗಿದೆ.
ಈ ಜಪವು ಪರಮ ಪೂಜ್ಯ ಗುರುವರ್ಯ ಶ್ರೀ ವಿದ್ಯಾಧೀಶ ವಡೇರ ಸಂಕಲ್ಪದಂತೆ 17ನೇ ಏಪ್ರಿಲ್ 2024 ರ ರಾಮ ನವಮಿಯಂದು ಕರ್ನಾಟಕ, ಮುಂಬಯಿ ಸೇರಿದಂತೆ ಸಂಸ್ಥಾನದ ಎಲ್ಲಾ ಮಠಗಳ ಶಾಖೆಗಳಲ್ಲಿ ಆರಂಭಗೊಂಡಿದೆ. ಈ ಜಪ 18 ಅಕ್ಟೋಬರ್ 2025 ರವರೆಗೆ ಮುಂದುವರಿಯುತ್ತದೆ. ಎಲ್ಲಾ ಕಡೆಗಳಲ್ಲೂ ಉತ್ತಮ ಪ್ರತಿಕ್ರಿಯೆ ದೊರೆತಿದೆ.
ಈ ಅಭಿಯಾನದ ಅಂಗವಾಗಿ ಮಂಗಳೂರು ರಥ ಬೀದಿಯ ಶ್ರೀಗೋಕರ್ಣ ಪರ್ಥಗಾಳಿ ಜೀವೋತ್ತಮ ಶಾಖಾ ಮಠದಲ್ಲಿ ಶ್ರೀರಾಮ ನವಮಿಯಂದು ಆರಂಭಗೊಂಡು ಮೂರು ನಾಲ್ಕು ಪಾಳಿಗಳಲ್ಲಿ ನಡೆಯುತ್ತದೆ. ಮೇ 19 ರಂದು 1580 ಜಪಕರು ಒಟ್ಟು 20.83 ಲಕ್ಷ ರಾಮನಾಮ ತಾರಕ ಮಂತ್ರ ಜಪ ಮಾಡಿದರು. ಈ ಅಭಿಯಾನದಲ್ಲಿ ಕಾಸರಗೋಡು, ಕಾಂಞಗಾಡ್, ಪುತ್ತೂರು, ಉಳ್ಳಾಲ, ಸುರತ್ಕಲ್, ಗುರುಪುರ ಸೇರಿದಂತೆ ವೈದಿಕರು ಭಾಗವ ಹಿಸುವ ಮೂಲಕ ಉತ್ತಮ ಪ್ರತಿಕ್ರೀಯೆ ದೊರೆತಿದೆ. ಪ್ರತಿದಿನ ಸರಾಸರಿ 2.4 ಲಕ್ಷ ಜಪವನ್ನು ಮಾಡಲಾ ಗುತ್ತಿದೆ ಮತ್ತು ಮುಂದಿನ ದಿನಗಳಲ್ಲಿ ಇದು ಹೆಚ್ಚಾಗುವ ಸಾಧ್ಯತೆಯಿದೆ. ಒಂದೂವರೆ ಸಂವತ್ಸರದವರೆಗೆ ನಡೆಯುವ ಈ ಅಭಿಯಾನದಲ್ಲಿ ಸಮಾಜ ಬಾಂಧವರು ಶ್ರದ್ಧೆ, ಭಕ್ತಿಯಿಂದ ಭಾಗವಹಿಸುವಂತೆ ಅಭಿಯಾನದ ಸಂಘಟಕರ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ