ಗೋವಿಂದ ದಾಸ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Upayuktha
0


ಸುರತ್ಕಲ್‌: ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಶಿಕ್ಷಕರ ಮತ್ತು ಹೆತ್ತವರ ಪಾತ್ರ ಸಮಾನವಾಗಿದ್ದು ಹೆತ್ತವರು ನಿಯಮಿತವಾಗಿ ಕಾಲೇಜಿಗೆ ಭೇಟಿ ನೀಡಿ  ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ಬಗ್ಗೆ ಅಧ್ಯಾಪಕರಲ್ಲಿ ಮಾಹಿತಿ ಪಡೆದುಕೊಳ್ಳುವುದರಿಂದ ಅವರ ಶೈಕ್ಷಣಿಕ ಬದುಕು ಸುಗಮವಾಗುತ್ತದೆ ಎಂದು ಗೋವಿಂದ ದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ಗೋಪಾಲ ಎಂ. ಗೋಖಲೆ ನುಡಿದರು. ಅವರು ಗೋವಿಂದ ದಾಸ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನಿವೃತ್ತ ಪ್ರಾಧ್ಯಾಪಕರಿಗೆ  ಹಾಗೂ ವಿದ್ಯಾರ್ಥಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.


ಶೈಕ್ಷಣಿಕ ಚಿಂತಕ ಹಾಗೂ ಖ್ಯಾತ ವಾಗ್ಮಿ ಬಾರ್ಕೂರಿನ ದಾಮೋದರ ಶರ್ಮ ತಮ್ಮ ಉಪನ್ಯಾಸದಲ್ಲಿ ಯುವಜನರು  ಸೂಕ್ಷö್ಮ ಮನಸ್ಥಿತಿಯನ್ನು ಹೊಂದಿದ್ದು  ಹೆತ್ತವರು ಸ್ನೇಹಿತರಂತೆ ಮಕ್ಕಳೊಂದಿಗೆ ವ್ಯವಹರಿಸಬೇಕು. ತಪ್ಪು ಮಾಡಿದಾಗ ಶಿಕ್ಷಿಸದೆ, ಅವಮಾನಗೊಳಿಸದೆ  ತಾಳ್ಮೆಯಿಂದ ತಿಳಿಹೇಳಿದರೆ ಖಂಡಿತವಾಗಿಯೂ ಮಕ್ಕಳು ತಮ್ಮ ವ್ಯಕ್ತಿತ್ವವನ್ನು ಬದಲಿಸಿಕೊಳ್ಳುತ್ತಾರೆ. ಮಕ್ಕಳಿಗೆ  ಸಾಮಾಜಿಕ ಜಾಲತಾಣಗಳ ದುರ್ಬಳಕೆ ಮತ್ತು ಮಾದಕ ವ್ಯಸನಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಶಿಕ್ಷಕರೊಂದಿಗೆ ಹೆತ್ತವರೂ ನೀಡಬೇಕೆಂದರು.


ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ಮಾತನಾಡಿ ಶಿಕ್ಷಕ ರಕ್ಷಕ ಸಂಘವು ಕಾಲೇಜಿನ ಎಲ್ಲಾ ಕಾರ್ಯ ಚಟುವಟಿಕೆಗಳಿಗೆ ನಿರಂತರ ಬೆಂಬಲ ನೀಡುತ್ತಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಪಠ್ಯೇತರ ಚಟುವಟಿಕೆಗಳು ಉತ್ತಮವಾಗಿ ಮುಂದುವರೆಯುತ್ತಿದೆ ಎಂದರು.


ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಡಿ. ಮಾತನಾಡಿ ರಕ್ಷಕ-ಶಿಕ್ಷಕ ಸಂಘವು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಅರ್ಹ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆ, ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಸ್ಪರ್ಧೆಗಳಿಗೆ ಬಹುಮಾನಗಳನ್ನು ಪ್ರತೀ ವರ್ಷ ನೀಡುತ್ತಿದೆ. ಪ್ರತಿಯೊಬ್ಬ ಹೆತ್ತವರು ರಕ್ಷಕ-ಶಿಕ್ಷಕ ಸಂಘದ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಬೇಕೆಂದರು.


2022-23ನೇ ಶೈಕ್ಷಣಿಕ ಸಾಲಿನ ಮಂಗಳೂರು ವಿ.ವಿಯ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಮತ್ತು ರಾಷ್ಟçಮಟ್ಟದ ಯುವಜನೋತ್ಸವದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯವನ್ನು ಪ್ರತಿನಿಧಿಸಿ ಸ್ಕಿಟ್‌ನಲ್ಲಿ ತೃತೀಯ ಸ್ಥಾನಗಳಿಸಿದ  ತಂಡದ ಸದಸ್ಯರನ್ನು ಮತ್ತು ರಾಷ್ಟçಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿನಿ ಮೋಕ್ಷಾ ಅಮೀನ್ ಅವರನ್ನು ಅಭಿನಂದಿಸಲಾಯಿತು. ಡಾಕ್ಟರೇಟ್ ಪದವಿ ಪಡೆದ ಕಾಲೇಜಿನ ಉಪನ್ಯಾಸಕಿ ಕ್ಯಾಪ್ಟನ್. ಡಾ. ಸುಧಾ ಯು. ಅವರನ್ನು ಗೌರವಿಸಲಾಯಿತು.  ನಿಕಟಪೂರ್ವ ಆಡಳಿತಾತ್ಮಕ ನಿರ್ದೇಶಕ ಪ್ರೊ. ರಮೇಶ್ ಕುಳಾಯಿ, ನಿವೃತ್ತ ಉಪಪ್ರಾಂಶುಪಾಲ ಪ್ರೊ. ರಮೇಶ್ ಭಟ್ ಎಸ್.ಜಿ., ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಗೋಪಾಲ ಎಂ. ಗೋಖಲೆ, ಪ್ರೊ. ಮಾರ್ಸೆಲ್ ಲೂಯೀಸ್ ಮಸ್ಕರೇನ್ಹಸ್ ಅವರನ್ನು ಸನ್ಮಾನಿಸಲಾಯಿತು.


ರಕ್ಷಕ ಶಿಕ್ಷಕ ಸಂಘದ ಕಾರ್ಯದರ್ಶಿ ಶೈಲಜಾ ಹೆಚ್. ಸ್ವಾಗತಿಸಿ ವಾರ್ಷಿಕ ವರದಿ ವಾಚಿಸಿದರು. ಜೊತೆ ಕಾರ್ಯದರ್ಶಿ ವಿದ್ಯಾ ಸಿ. ಪಾಟೇಲ್ ಸಾಧಕರ ಪಟ್ಟಿಯನ್ನು ವಾಚಿಸಿದರು. ಪೂರ್ಣಿಮಾ ಎಂ. ಗೋಖಲೆ ಸನ್ಮಾನಿತರ ಪಟ್ಟಿಯನ್ನು ವಾಚಿಸಿದರು.  ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯ ಪ್ರವೀಣ್ ಅತಿಥಿಗಳನ್ನು ಪರಿಚಯಿಸಿದರು. ನೂತನ ಪದಾಧಿಕಾರಿಗಳ ಆಯ್ಕೆಯನ್ನು ಕಾಲೇಜಿನ ಉಪಪ್ರಾಂಶುಪಾಲ ಪ್ರೊ. ನೀಲಪ್ಪ ವಿ. ನಡೆಸಿದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಪ್ರೊ. ಹರೀಶ ಆಚಾರ್ಯ ಪಿ. ವಂದಿಸಿದರು. ಉಪನ್ಯಾಸಕ ಡಾ. ಸಂತೋಷ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಸುಮಿತ್ರಾ, ಸಲಹಾ ಸಮಿತಿಯ ಸದಸ್ಯರಾದ  ನಾರಾಯಣ ಗೌಡ, ಮಾಧವ ಕೋಟ್ಯಾನ್, ಲೀಲಾಧರ ಶೆಟ್ಟಿ ಕಾರ್ಯಕಾರಿ ಸಮಿತಿಯ ಸದಸ್ಯ ಪ್ರೊ. ವಾಮನ ಕಾಮತ್, ಶಿಕ್ಷಕ ಸಂಘದ ಕಾರ್ಯದರ್ಶಿ ಗೀತಾ ಕೆ. ಉಪಸ್ಥಿತರಿದ್ದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top