ಸುರತ್ಕಲ್: ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗವು, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಭಾಗಿತ್ವದಲ್ಲಿ ನಡೆಸುತ್ತಿರುವ ಪುಸ್ತಕ ಪ್ರೀತಿ ಪರಿಚಯ ಸರಣಿ ಕಾರ್ಯಕ್ರಮದಲ್ಲಿ, ತೃತೀಯ ಬಿ.ಸಿ.ಎ ವಿದ್ಯಾರ್ಥಿನಿ ದಿವ್ಯಶ್ರೀ ಕೆ.ಎನ್.ಭಟ್ ರವರು ಟಿ.ಆರ್.ಅನಂತರಾಮು ರವರು ಬರೆದ ಶಕ್ತಿ ಸಾರಥಿ ರಾಷ್ಟç್ಟಪತಿ ಅಬ್ದುಲ್ ಕಲಾಂ ಎಂಬ ಪುಸ್ತಕವನ್ನು ಪರಿಚಯಿಸಿದರು. ಈ ಕೃತಿಯಲ್ಲಿ ಬಾನಾಡಿಗಳಂತೆ ಬಾನಿನಲ್ಲಿ ಹಾರಬೇಕೆಂದು ಬಯಸಿದ ಹುಡುಗ ಮುಂದೆ ತಂತ್ರಜ್ಞಾನದಿAದ ನಮ್ಮ ಆಕಾಶವನ್ನು ಆಳಿದ ಕಥೆ, ನಮ್ಮ ಪ್ರಜಾಪ್ರಭುತ್ವದ ರಥಕ್ಕೇ ಸಾರಥಿಯಾದ ಕಥೆ, ಸೋಲನ್ನು ಅರಗಿಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಂಡ ಮಹಾನ್ ವ್ಯಕ್ತಿಯ ಜೀವನ ಚಿತ್ರಣ ಸುಂದರವಾಗಿ ಮೂಡಿಬಂದಿವೆೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಕೃಷ್ಣಮೂರ್ತಿಯವರು , ದಿವ್ಯಶ್ರೀ ಕೆ.ಎನ್.ಭಟ್ ರವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಬಿ.ಸಿಎ ವಿಭಾಗದ ಮುಖ್ಯಸ್ಥೆ ಗೀತಾ, ಉಪನ್ಯಾಸಕರುಗಳಾದ, ಬಬಿತಾ, ವೀಣಾ, ವಿದ್ಯಾ ಪಾಟೀಲ್, ಡಾ. ಸಂತೋಷ ಆಳ್ವ, ಗ್ರಂಥಪಾಲಕಿ ಡಾ.ಸುಜಾತಾ ಬಿ, ಗ್ರಂಥಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು. ತೃತೀಯ ವಿದ್ಯಾರ್ಥಿನಿ ಬಿ.ಸಿ.ಎ ಅಶ್ವಿನಿ ಪಿ.ಎನ್ ಸ್ವಾಗತಿಸಿ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ