ಸುರತ್ಕಲ್: ಶಾಸ್ತ್ರೀಯ ಸಂಗೀತದಿಂದ ಪರಿಪೂರ್ಣ ಅನುಭವದ ಆನಂದ ಲಭ್ಯವಾಗುತ್ತದೆ. ಸಾಮಾಜಿಕ ಸೇವಾ ಸಂಸ್ಥೆಗಳು ಆದ್ಯತೆಯ ನೆಲೆಯಲ್ಲಿ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದು ಸುರತ್ಕಲ್ ರೋಟರಿ ಕ್ಲಬ್ನ ನಿಯೋಜಿತ ಅಧ್ಯಕ್ಷ ಸಂದೀಪ್ ರಾವ್ ಇಡ್ಯಾ ನುಡಿದರು. ಅವರು ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ) ಸುರತ್ಕಲ್ ಸಹಭಾಗಿತ್ವದಲ್ಲಿ ಸುರತ್ಕಲ್ ರೋಟರಿ ಕ್ಲಬ್ ಪ್ರಾಯೋಜಕತ್ವದಲ್ಲಿ ಸುರತ್ಕಲ್ ಫ್ಲೈ ಓವರ್ ಕೆಳಗಡೆ ನಡೆದ ಉದಯರಾಗ 53 ಶಾಸ್ತ್ರೀಯ ಸಂಗೀತ ಸರಣಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸುರತ್ಕಲ್ ರೋಟರಿ ಕ್ಲಬ್ ಅಧ್ಯಕ್ಷ ಯೋಗೀಶ್ ಕುಳಾಯಿ ಶುಭ ಹಾರೈಸಿದರು.
ಉಡುಪಿಯ ರಾಗಧನ ಸಂಸ್ಥೆಯ ಕಾರ್ಯದರ್ಶಿ ಉಮಾಶಂಕರಿ, ಆರಾಧನ ಕಲಾಭವನ ಸಾರಡ್ಕದ ಶಂಕರ್ ಸಾರಡ್ಕ, ನಾಗರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಕೆ. ರಾಜಮೋಹನ ರಾವ್ ಉಪಸ್ಥಿತರಿದ್ದರು.
ಗೀತಾ ಸಾರಡ್ಕ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ಅನನ್ಯ ಪಿ.ಎಸ್. ಪುತ್ತೂರು ವಯಲಿನ್ನಲ್ಲಿ ಹರಿಕೃಷ್ಣ ಪಾವಂಜೆ ಮೃದಂಗದಲ್ಲಿ ಸಹಕರಿಸಿದರು.
ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ)ಯ ಕಾರ್ಯದರ್ಶಿ ನಿತ್ಯಾನಂದ ರಾವ್ ಕಾರ್ಯಕ್ರಮ ಸಂಯೋಜಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ