ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಟ್ಯಾಲಿ ತರಬೇತಿ ಕಾರ್ಯಾಗಾರ

Upayuktha
0

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಉಪನ್ಯಾಸಕರಿಗೆ ಟ್ಯಾಲಿ ತರಬೇತಿ ಕಾರ್ಯಾಗಾರವು ಉದ್ಘಾಟನೆಗೊಂಡಿತು. ತರಬೇತಿ ಕಾರ್ಯಾಗಾರವನ್ನು ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಸಿಟಿಕಲ್ ಸೈನ್ಸ್‌ನ ಪ್ರಾಂಶುಪಾಲರಾದ ಡಾ. ಗುರುರಾಜ ಎಂ. ಪಿ. ಕಾರ್ಯಾಗಾರವನ್ನು ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಜಗತ್ತಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಜೊತೆ ಹೊಂದಿಕೊಂಡು ಮುಂದುವರೆಯುವುದು ಅತ್ಯಗತ್ಯ. ಪದವಿಪೂರ್ವ ಹಂತದಲ್ಲೇ ವಿದ್ಯಾರ್ಥಿಗಳನ್ನು ಕೌಶಲ್ಯಪೂರ್ಣರಾಗಿಸುವ ವಿವೇಕಾನಂದ ಪದವಿಪೂರ್ವ ಕಾಲೇಜಿನ ಈ ಪ್ರಯತ್ನ ಶ್ಲಾಘನೀಯ ಎಂದು ಶುಭ ಹಾರೈಸಿದರು. 


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ ವಹಿಸಿದ್ದರು. ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ದೇವಿಚರಣ್ ರೈ ಹಾಗೂ ಟ್ಯಾಲಿ ತರಬೇತುದಾರರಾದ ರಕ್ಷಾ ನಾಯಕ್ ಮಂಗಳೂರು ಉಪಸ್ಥಿತರಿದ್ದರು.


ಎರಡು ದಿನಗಳ ತರಬೇತಿ:

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸ್ತುತ ವರ್ಷದಿಂದ ವಾಣಿಜ್ಯ ವಿದ್ಯಾರ್ಥಿಗಳಿಗೆ ಕಂಪ್ಯೂಟರ್, ಷೇರು ಮಾರುಕಟ್ಟೆ ಮತ್ತು ಟ್ಯಾಲಿ ವಿಷಯಗಳ ಬಗ್ಗೆ ಸರ್ಟಿಫಿಕೇಟ್ ಕೋರ್ಸ್ ಗಳನ್ನು ಪ್ರಾರಂಭಿಸಲಾಗಿದೆ. ಈ ನಿಟ್ಟಿನಲ್ಲಿ ವಿವಿಧ ಹಂತಗಳಲ್ಲಿ ಉಪನ್ಯಾಸಕರಿಗೆ ತರಬೇತಿ ಕಾರ್ಯಾಗಾರಗಳನ್ನು ನಡೆಸಲಾಗುತ್ತಿದೆ.


ಕಾರ್ಯಕ್ರಮವನ್ನು ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ದೇವಿಪ್ರಸಾದ್ ನಿರೂಪಿಸಿದರು, ವಾಣಿಜ್ಯ ವಿಭಾಗದ ಉಪನ್ಯಾಸಕರು ಕಾರ್ಯಕ್ರಮವನ್ನು ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top