ಶಾಂತಾ ಪುತ್ತೂರು ಅವರಿಗೆ ಸೌರಭ ರತ್ನ ಪ್ರಶಸ್ತಿ

Upayuktha
0

ಮುಡಿಪು: ಕಥಾಬಿಂದು ಪ್ರಕಾಶನ ಮಂಗಳೂರು ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ಸಾಹಿತ್ಯ ಸಂಭ್ರಮ 2024 ಮೇ 26ರಂದು ಮುಡಿಪುವಿನ ಭಾರತಿ ಶಾಲೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ ಬೊಳುವಾರು ನಿವಾಸಿ ಶಾಂತಾ ಪುತ್ತೂರುರವರಿಗೆ ಸೌರಭ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪರು ಕಾರ್ಯಕ್ರಮ ಉದ್ಘಾಟಿಸಿದರು. ಕಸಾಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.


ಹಿರಿಯ ಸಾಹಿತಿ ಶ್ರೀಮತಿ ಬಿ.ಸತ್ಯವತಿ ಎಸ್ ಭಟ್ ಕೊಳಚಪ್ಪು, ಕಥಾಬಿಂದು ಪ್ರಕಾಶನದ ಪಿ.ವಿ. ಪ್ರದೀಪ್ ಕುಮಾರ್, ಗೋವಿಂದದಾಸ್ ಕಾಲೇಜು ಸುರತ್ಕಲ್ ನ ಪ್ರಾಂಶುಪಾಲ ಪ್ರೊ.ವಿ. ಕೃಷ್ಣಮೂರ್ತಿ, ಹಿರಿಯ ಸಾಹಿತಿ ಜಯಾನಂದ ಪೆರಾಜೆ, ಎನ್. ಸುಬ್ರಾಯ ಭಟ್ ಮಂಗಳೂರು, ಭಾರತಿ ಶಾಲೆಯ ಸಂಚಾಲಕ ಕೊಡಕ್ಕಲ್ಲು ಸುಬ್ರಹ್ಮಣ್ಯ ಭಟ್, ಮೈಸೂರಿನ ನಿವೃತ್ತ ಉಪನ್ಯಾಸಕ ಕೆಂಪರಾಜು, ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿ ಅನಂತ ಎಮ್.ತಾಮನ್ಕರ್ ಉಪಸ್ಥಿತರಿದ್ದರು. ನಂತರ ಶಿಕ್ಷಣ ತಜ್ಞ ವಿ.ಬಿ ಕುಳಮರ್ವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು. ಕವಯಿತ್ರಿ ಅಪೂರ್ವ ಕಾರಂತ್ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

 

إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top