ಉಡುಪಿ: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ಭಾರತೀಯ ಜನ ಔಷಧಿ ಕೇಂದ್ರ ಮತ್ತು ರೋಟರಿ ಕ್ಲಬ್ ಬ್ರಹ್ಮಾವರ ಇದರ ಸಂಯುಕ್ತ ಆಶ್ರಯದಲ್ಲಿ ಮಳೆ ಬೆಳೆಗಾಗಿ 'ಪ್ರಾಣಿ ಪಕ್ಷಿ ಸಂಕುಲ ಮನುಕುಲದ ಉಳಿವಿಗಾಗಿ ಪರಿಸರ ಜಾಗೃತಿ ವಿಚಾರ ಸಂಕಿರಣ ಮೇ 25 ರಂದು ಅಪರಾಹ್ನ 3 ರಿಂದ 5 ರವರೆಗೆ ರೋಟರಿ ಭವನದಲ್ಲಿ ನಡೆಯಲಿದೆ.
ಕಾಯ೯ಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಖ್ಯಾತ ಉರಗ ತಜ್ಞ ಗುರುರಾಜ್ ಸನಿಲ್ ಮತ್ತು ಪರಿಸರ ಹೋರಾಟಗಾರ ಪ್ರೇಮಾನಂದ ಕಲ್ಮಾಡಿ ಭಾಗವಹಿಸಲಿರುವರು. ಈ ಕಾಯ೯ಕ್ರಮದಲ್ಲಿ ಪರಿಸರ ಪರ ಸಂಘ ಸಂಸ್ಥೆಗಳು ಸಾವ೯ಜನಿಕರು ವಿಚಾರ ವಿನಿಮಯ ಮಾಡಲಿದ್ದಾರೆ ಎಂದು ಜಯಂಟ್ಸ್ ಅಧ್ಯಕ್ಷರಾದ ಸುಂದರ ಪೂಜಾರಿ ಮೂಡುಕುಕ್ಕುಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ