ಮಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜನವರಿ 2024 ರಲ್ಲಿ ನಡೆಸಿದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಪಕರ ಅರ್ಹತೆ ಪರೀಕ್ಷೆ ಕೆ- ಸೆಟ್ ನಲ್ಲಿ ಸುರತ್ಕಲ್ ಮಧ್ಯ ದ ಶ್ರೀಮತಿ ಶ್ವೇತ ಪ್ರಜ್ವಲ್ ರವರು ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ರಾಜ್ಯದಲ್ಲಿ 13 ನೇ ಸ್ಥಾನ ಪಡೆದು ಉತ್ತೀರ್ಣರಾಗಿದ್ದಾರೆ. ಇವರು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಎಂಸಿಜೆ ಸ್ನಾತಕೋತ್ತರ ಪದವಿಯಲ್ಲಿ 3ನೇ ರ್ಯಾಂಕ್ ಪಡೆದಿರುತ್ತಾರೆ.
ಇವರು ಮಧ್ಯ ದಿ. ನಾರಾಯಣ ಮಾಸ್ಟರ್ ಹಾಗೂ ದಿ. ಅನುಸೂಯ ದಂಪತಿಯ ಪುತ್ರಿ. ತೊಕ್ಕೊಟ್ಟು ಕಾಪಿಕಾಡ್ ನ ಪ್ರಜ್ವಲ್ ಕಿರಣ್ ಸಾಲ್ಯಾನ್ ಅವರ ಪತ್ನಿಯಾಗಿದ್ದಾರೆ. ಪ್ರಸ್ತುತ ಮಂಗಳೂರು ವಿವಿ ಸಂಧ್ಯಾ ಕಾಲೇಜಿನಲ್ಲಿ ಪತ್ರಿಕೋದ್ಯಮ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ