ಬೆಂಗಳೂರು: ವಯ್ಯಾಲಿಕಾವಲಿನ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ಜೂನ್ 15, ಶನಿವಾರ ಸಂಜೆ ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಏರ್ಪಡಿಸಿದ್ದ "ಊಂಜಲ್ ಸಂಗೀತೋತ್ಸವ" ಕಾರ್ಯಕ್ರಮದಲ್ಲಿ 'ಯುವಗಾಯಕ' ಶ್ರೀ ಪಿ.ಎಸ್.ಬಿ. ಪ್ರತ್ಯುಷ್ ಅವರು ಶ್ರೀ ಅನ್ನಮಾಚಾರ್ಯರ ಕೀರ್ತನೆಗಳನ್ನೂ ಮತ್ತು ಶ್ರೀ ಹರಿದಾಸರ ಕೃತಿಗಳನ್ನೂ ಪ್ರಸ್ತುತ ಪಡಿಸಿದರು.
ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ಎಂ.ಎನ್. ಸತ್ಯನಾರಾಯಣ ಹಾಗೂ ಮೃದಂಗ ವಾದನದಲ್ಲಿ ಶ್ರೀನಿವಾಸ್ ಅನಂತರಾಮಯ್ಯ ಸಾಥ್ ನೀಡಿದರು. ಟಿ.ಟಿ.ಡಿ. ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ಅವರು ಸ್ವಾಗತ ಮತ್ತು ವಂದನಾರ್ಪಣೆ ಮಾಡಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ