ರೇಡಿಯೋ ಮಣಿಪಾಲ್‌ನಲ್ಲಿ ಡೆಂಗೆ, ಮಲೇರಿಯಾ ಜಾಗೃತಿ ಕಾರ್ಯಕ್ರಮ

Upayuktha
0


ಮಣಿಪಾಲ: ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಡೆಂಗ್ಯೂ, ಮಲೇರಿಯಾ ಜಾಗೃತಿ ಕುರಿತು ವಿಶೇಷ ಸಂದರ್ಶನ ಮೂಡಿಬರಲಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ಜೂನ್ ತಿಂಗಳ ದಿನಾಂಕ 10ರಂದು ಸೋಮವಾರ ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ ಮತ್ತು ಜೂನ್ 11ರಂದು ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಇದರ ಮರು ಪ್ರಸಾರವಿರುತ್ತದೆ.


ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top