ಗುರುರಾಯರ ಸನ್ನಿಧಿಯಲ್ಲಿ ಭವಾನಿ ಗಾಯನ

Upayuktha
0


ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಮಲ್ಲೇಶ್ವರದ ಈಜುಕೊಳದ ಬಡಾವಣೆಯ ಸುಧೀಂದ್ರನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜೂನ್ 22, ಶನಿವಾರ ಸಂಜೆ ಏರ್ಪಡಿಸಿದ್ದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮದಲ್ಲಿ ಶ್ರೀಮತಿ ಭವಾನಿ ಎಂ. ರಾವ್ ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಕೃತಿಗಳನ್ನು ಪ್ರಸ್ತುತಪಡಿಸಿದರು.


ಇವರ ಗಾಯನಕ್ಕೆ ಎಂ.ಎನ್. ಸತ್ಯನಾರಾಯಣ ಪಿಟೀಲು ವಾದನದಲ್ಲಿ ಹಾಗೂ ಶ್ರೀ ಶ್ರೀನಿವಾಸ್ ಅನಂತರಾಮಯ್ಯ ಮೃದಂಗ ವಾದನದಲ್ಲಿ ಸಾಥ್ ನೀಡಿದರು. ಶ್ರೀಮಠದ ಪದಾಧಿಕಾರಿಗಳು, ಸಿಬ್ಬಂದಿಗಳು ಹಾಗೂ ಅನೇಕ ಸಂಗೀತಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ಅವರು ಸ್ವಾಗತ ಮತ್ತು ವಂದನಾರ್ಪಣೆ ಮಾಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top