ಮಿಂಚಿನ ಸಂಚಾರ ತಂಡದಲ್ಲಿ ಶಿಕ್ಷಣಾಧಿಕಾರಿಗಳಿಂದ ಮಾರ್ಗದರ್ಶನ

Upayuktha
0


ಹಾಸನ: ಶಾಲೆಯಲ್ಲಿ ಪೂರ್ವ ಸಿದ್ಧತೆ ಮತ್ತು ಪ್ರಾರಂಭೋತ್ಸವ ಕಾರ್ಯಕ್ರಮಗಳು ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿಯಂತೆ ನಡೆಯುಬೇಕು.  ಮಕ್ಕಳ ಕಲಿಕೆಯನ್ನು ದೃಢೀಕರಿಸಲು ದಾಖಲೆಗಳು ಪ್ರಮುಖವಾಗಿರುವುದರಿಂದ ಅವುಗಳ ನಿರ್ವಹಣೆ ಸೂಕ್ತ ರೀತಿಯಲ್ಲಿ ಇರಬೇಕು ಎಂದು ಜಿಲ್ಲಾ ಉಪನಿರ್ದೇಶಕರ ಕಛೇರಿಯ ಶಿಕ್ಷಣಾಧಿಕಾರಿ ಹೆಚ್.ಬಿ.ಮೋಹನ್ ಕುಮಾರ್, ಶಿಕ್ಷಣಾಧಿಕಾರಿ ಜೆ.ಬಿ.ತಮ್ಮಣ್ಣ ಗೌಡರು ಮತ್ತು ವಿಷಯ ಪರಿವೀಕ್ಷಕರಾದ ಶೇಖರೇಗೌಡ ರವರ ತಂಡವು ಮಾರ್ಗದರ್ಶನ ನೀಡಿತು.


ಉಪನಿರ್ದೇಶಕರ ಆದೇಶಾನುಸಾರ ರಚನೆಯಾದ ಮಿಂಚಿನ ಸಂಚಾರ ತಂಡದಲ್ಲಿ ಹೊಳೆನರಸೀಪುರ ತಾಲ್ಲೂಕಿನ ಹರಿಹರಪುರದ ಕೆ. ಪಿ.ಎಸ್. ಶಾಲಾ ವ್ಯಾಪ್ತಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲಾ ಪರಿಸರ, ಶೈಕ್ಷಣಿಕ ವಾತಾವರಣ, ತರಗತಿ ಕೊಠಡಿಗಳ ಸ್ವಚ್ಚತೆ, ವಿವಿಧ ರೀತಿಯ ವೇಳಾಪಟ್ಟಿಗಳು, ವಾರ್ಷಿಕ ಕಾರ್ಯ ಹಂಚಿಕೆ, ಅಕ್ಷರ ದಾಸೋಹ ಕಾರ್ಯಕ್ರಮದ ಸಿದ್ಧತೆ ಹಾಗೂ ಶೌಚಾಲಯ ವ್ಯವಸ್ಥೆಗಳನ್ನು ಸಮಗ್ರ ಅಧ್ಯಯನದ ರೀತಿಯಲ್ಲಿ ಪರಿಶೀಲಿಸಿ ಮಾರ್ಗದರ್ಶನ ನೀಡಿದರು. ಪ್ರಸ್ತುತ 2024 - 25 ನೇ ವರ್ಷವು "ಶೈಕ್ಷಣಿಕ ಬಲವರ್ಧನೆ ವರ್ಷ" ಆಗಿರುವುದರಿಂದ ಈ ವರ್ಷದಲ್ಲಿ ಮಕ್ಕಳ ದಾಖಲಾತಿಗೆ ಹೆಚ್ಚಿನ ಆದ್ಯತೆ ಮತ್ತು ಗುಣ ಮಟ್ಟದ ಕಲಿಕೆಗೆ ಆದ್ಯತೆ ನೀಡಿ ಎಲ್ಲಾ ಶಿಕ್ಷಕರೂ ಶಾಲಾಭಿವೃದ್ಧಿಗೆ ಪೂರಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರಗಳನ್ನು ವಿತರಿಸಲಾಯಿತು. 


ಈ ಸಂದರ್ಭದಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿ ಮಂಜುನಾಥ್,  ಶಾಲಾ ಮುಖ್ಯ ಶಿಕ್ಷಕರಾದ ಮಂಜಾಚಾರಿ ಹಾಗೂ ಸಹ ಶಿಕ್ಷಕರು ಹಾಜರಿದ್ದು ಶಾಲಾ ಕರ್ತವ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top