ಮೋದಿ ಪ್ರಮಾಣವಚನ‌ ಸಮಾರಂಭಕ್ಕೆ ಆಹ್ವಾನ, ಬೆಂಗಳೂರಿನಿಂದ ದೆಹಲಿಯತ್ತ ಪೇಜಾವರ ಶ್ರೀ

Upayuktha
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಭಾಗವಹಿಸಲು ಉಡುಪಿ ಪೇಜಾವರ ಮಾಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಆಹ್ವಾನ ಬಂದಿದೆ. ಶನಿವಾರ ತಡರಾತ್ರಿ ವೇಳೆಗೆ ಪ್ರಧಾನಿ ಕಾರ್ಯಾಲಯದಿಂದ ಬೆಂಗಳೂರಿನಲ್ಲಿರುವ ಪೇಜಾವರ ಶ್ರೀಗಳಿಗೆ ಆಹ್ವಾನ ತಲುಪಿದ್ದು, ಇಂದು ಬೆಳಗ್ಗೆ ಶ್ರೀಗಳು ದೆಹಲಿಗೆ ತೆರಳಿದ್ದಾರೆ.


ಅಯೋಧ್ಯೆಯ ರಾಮ ಮಂದಿರ ಆದೋಲನದಲ್ಲಿ ಭಾಗಿಯಾಗಿ, ಹಿಂದೂ ಸಮಾಜದ ಸಂಘಟನೆಯಲ್ಲಿ ಮಹತ್ವದ ಪಾತ್ರವಹಿಸಿದ್ದ, ಹಿಂದೂ ಸಮಾಜದ ಸುಧಾರಣೆಯಲ್ಲಿ ಹಲವಾರು ಪ್ರಮುಖ ಕಾರ್ಯಯೋಜನೆಗಳನ್ನು ಸಾಧಿಸಿದ ಪೇಜಾವರ ಮಠದ ಹಿರಿಯ ಶ್ರೀಗಳಾಗಿದ್ದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರಿಗೆ ಮೋದಿ ನೇತೃತ್ವದ ಕೇಂದ್ರ ಸರಕಾರ ಪದದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.


ಅಲ್ಲದೆ ಅಯೋಧ್ಯೆ ರಾಮ ಮಂದಿರ ನಿರ್ಮಾಣ, ನಿರ್ವಹಣೆಯ ಹೊಣೆ ಹೊತ್ತಿರುವ ಅಯೋಧ್ಯಾ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರಾಗಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಆಯ್ಕೆ ಮಾಡಲಾಗಿತ್ತು. ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲೂ ಪೇಜಾವರ ಶ್ರೀಗಳಿಗೆ ವಿಶೇಷ ಅವಕಾಶ ದೊರಕಿತ್ತು. ಪ್ರಾಣಪ್ರತಿಷ್ಠೆಯ ನಂತರ 48 ದಿನಗಳ ಕಾಲ ಶ್ರೀ ವಿಶ್ವಪ್ರಸನ್ನ ತೀರ್ಥರ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ವೈಭವಪೂರ್ಣ ಮಂಡಲೋತ್ಸವವೂ ನಡೆದಿತ್ತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top