ಪತ್ರಿಕೋದ್ಯಮ ಎಂ.ಎ: ವಿವೇಕಾನಂದ ಕಾಲೇಜಿನ ದಿವ್ಯಾಶ್ರೀ ರೈ ಫಸ್ಟ್ ರ್‍ಯಾಂಕ್

Upayuktha
0

ಮಂಗಳೂರು ವಿವಿ ಫಲಿತಾಂಶ ಪ್ರಕಟ



ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ 2023ರ ಜುಲೈ ತಿಂಗಳಿನಲ್ಲಿ ನಡೆಸಿದ ಅಂತಿಮ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ವಿವೇಕಾನಂದ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿನಿ ದಿವ್ಯಾ ಶ್ರೀ ರೈ ಪ್ರಥಮ ರ್‍ಯಾಂಕ್ ಗಳಿಸಿದ್ದಾರೆ.  


ಮೂಲತಃ ಪುತ್ತೂರಿನ ಅರಿಯಡ್ಕ ನಿಯಸಿಗಳಾದ ವಿಠಲ ರೈ ಮತ್ತು ಶಾಲಿನಿ ವಿ ರೈ ಇವರ ಸುಪುತ್ರಿಯಾದ ದಿವ್ಯಾ ಶ್ರೀ ಪ್ರಸ್ತುತ ಬೆಂಗಳೂರಿನ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯಲ್ಲಿ ಸೋಶಿಯಲ್ ಮೀಡಿಯಾ ಕಂಟೆಂಟ್ ರೈಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಇವರಿಗೆ ವಿವೇಕಾನಂದ (ಸ್ವಾಯತ್ತ) ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅದ್ಯಕ್ಷರು, ಸಂಚಾಲಕರು, ಸರ್ವ ಸದಸ್ಯರು, ಪ್ರಾಂಶುಪಾಲರು, ನಿರ್ದೇಶಕರು, ಡೀನ್, ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಶುಭಕೋರಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top