ಸುರಕ್ಷಾದಲ್ಲಿ ಸಸಿ ವಿತರಣೆ

Upayuktha
0


ಮಂಗಳೂರು: ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಜರುಗಿತು.ಸುಮಾರು 55 ಮಂದಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.  


ರಜಾಕ್ ಮತ್ತು ನಫೀಸಾ ದಂಪತಿಗಳಿಗೆ ಹಲಸಿನಹಣ್ಣಿನ ಗಿಡವನ್ನು ಡಾ ಮುರಲಿ ಮೋಹನ್ ಚೂಂತಾರು ಅವರು ನೀಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡಾ ರಾಜಶ್ರೀ  ಮೋಹನ್,ದಂತ ಪರಿಚಾರಕಿಯರಾದ ರಮ್ಯಾ, ಚೈತ್ರಾ, ಸುಷ್ಮಿತಾ, ಜಯಶ್ರೀ ಮುಂತಾದವರು ಉಪಸ್ಥಿತರಿದ್ದರು. ಕಳೆದ ಹತ್ತು ವರುಷಗಳಿಂದ ಸುರಕ್ಷಾ ದಂತ ಚಿಕಿತ್ಸಾಲಯ ನಿರಂತರವಾಗಿ ಸಸಿ ವಿತರಣೆ ಮತ್ತು ವನಮಹೋತ್ಸವ ಕಾರ್ಯಕ್ರಮವನ್ನು ಜೂನ್ ತಿಂಗಳಿಡೀ ಆಚರಿಸುತ್ತಾ ಬಂದಿದೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top