ಯೋಗದಿಂದ ಮಾನಸಿಕ ನೆಮ್ಮದಿ: ಡಾ ಚೂಂತಾರು

Upayuktha
0


ಮಂಗಳೂರು: ನಿರಂತರ ಯೋಗ ಮಾಡುವುದರಿಂದ ಜೀವನ ಶೈಲಿ ರೋಗಗಳಾದ ಅಧಿಕ ರಕ್ತದೊತ್ತಡ, ಮಧುಮೇಹ, ಹೃದಯಾಘಾತ ಮುಂತಾದ ರೋಗಗಳು ದೂರವಾಗುತ್ತದೆ. ಈ ಕಾರಣದಿಂದ ನಿರಂತರವಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಯೋಗ ತರಬೇತಿ ನಡೆಸಲಾಗುತ್ತಿದೆ. ಸಮಾಜದ ಸ್ವಾಸ್ಥ್ಯ ಕಾಪಾಡುವ ಗೃಹರಕ್ಷಕರಿಗೆ, ಅವರ ದೈಹಿಕ ಮತ್ತು ಮಾನಸಿಕ ಕ್ಷಮತೆ ಕಾಪಾಡಿಕೊಳ್ಳುವಲ್ಲಿ ‘ಯೋಗ’ ಅತ್ಯಗತ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಮತ್ತು ಪೌರರಕ್ಷಣಾದಳದ ಮುಖ್ಯ ಪಾಲಕ ಡಾ|| ಮುರಲೀ ಮೋಹನ್ ಚೂಂತಾರು ನುಡಿದರು.


ವಿಶ್ವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೂನ್ 21 ರಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಛೇರಿಯಲ್ಲಿ ಯೋಗ  ಶಿಬಿರ ಜರುಗಿತು. ಯೋಗ ಶಿಕ್ಷಕಿ ಸುಮಾ  ಮತ್ತು ಕಾರ್ತಿಕ್ ಇವರ   ಸಹಕಾರದೊಂದಿಗೆ ದೇಲಂಪಾಡಿ ಅವರು ಮಾರ್ಗದರ್ಶನದಲ್ಲಿ ಈ ಶಿಬಿರ ನಡೆಯಿತು. 20 ಮಂದಿ ಗೃಹರಕ್ಷಕರು ಈ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top