ಮಂಗಳೂರು: ವಿಕಲಾಂಗ ಚೇತನರು ಸ್ವಾವಲಂಬಿಗಳಾಗುವಂತಾಗಬೇಕು ಈ ನಿಟ್ಟಿನಲ್ಲಿ ಅವರಿಗೆ ಸಮಾಜದಿಂದ ಫ್ರೋತ್ಸಾಹ ದೊರೆಯಬೇಕು ಎಂದು ನಿಟ್ಟೆ ವಿಶ್ವ ವಿದ್ಯಾನಿಲಯದ ಸಹ ಕುಲಾಧಿಪತಿ ಹಾಗೂ ಖ್ಯಾತ ವೈದ್ಯರಾದ ಡಾ.ಎಂ. ಶಾಂತಾರಾಮ ಶೆಟ್ಟಿ ತಿಳಿಸಿದರು.
ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ವಿಶಿಷ್ಟ ಚೇತನರ ಸಂಘ, ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಶಾಖೆ, ಮಂಗಳೂರು ವಿಶ್ವವಿದ್ಯಾಲಯ ಯುವ ರೆಡ್ ಕ್ರಾಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾ ನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ಭಾನುವಾರ ಹಮ್ಮಿಕೊಂಡ ಸಂಘದ 32ನೆ ವಾರ್ಷಿಕ ದಿನಾಚರಣೆ, ವೈದ್ಯಕೀಯ ನೆರವು ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ವಿಶಿಷ್ಟ ಚೇತನರು ಸಮಾಜದಲ್ಲಿ ತಮ್ಮ ಮಾನಸಿಕ ದೃಢತೆಯಿಂದ ಬದುಕಿದವರು ಅವರಿಗೆ ಸ್ಫೂರ್ತಿ ನೀಡುವ,ಅವರನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕು. ಅವರು ಇತರರಂತೆ ಸ್ವತಂತ್ರ ವಾಗಿ ಬದುಕಲು ಶಾಶ್ವತವಾದ ನೆರವು ನೀಡುವಲ್ಲಿ ಸಾಮೂಹಿಕವಾದ ಪ್ರಯತ್ನ ಆಗಬೇಕು.ಈ ನಿಟ್ಟಿನಲ್ಲಿ ಅವರದೇ ಆದ ಒಂದು ಸಂಘವನ್ನು ನಿರ್ಮಿಸಿಕೊಂಡು ತಮ್ಮಂತೆ ಇರುವವರಿಗೆ ಪರಸ್ಪರ ಸಹಾಯ ಮಾಡುವಲ್ಲಿ 32ವರ್ಷಗಳ ಹಿಂದೆ ಸಂಘ ರಚಿಸಿರುವುದು ಶ್ಲಾಘನೀಯ.ಮೂರು ದಶಕಗಳ ಹಿಂದೆ ವೆನ್ಲಾಕ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಪ್ರಮಾಣ ಪತ್ರ ದಾಖಲೆ ಪಡೆಯಲು ವಿಶಿಷ್ಟ ಚೇತನರ ಬವಣೆ ಯನ್ನು ನಾನು ಗಮನಿಸಿ ವಿಕಾಲಾಂಗ ,ವಿಶಿಷ್ಟ ಚೇತನರಿಗೆ ಒಂದು ಸಂಘಟನೆ ಅಗತ್ಯವಿದೆ ಎನ್ನುವ ಆಸೆ ಇಂದು ಸಂಸ್ಥೆ ಬೆಳೆದು 32ನೆ ವಾರ್ಷಿಕ ಉತ್ಸವ ಆಚರಿಸುವ ಮೂಲಕ ಸಾರ್ಥಕಗೊಂಡಿದೆ ಈ ನಿಟ್ಟಿನಲ್ಲಿ ಸಮಾಜದ ಎಲ್ಲರ ಕೊಡುಗೆ ವಿಕಲಾಂಗ ಚೇತನರು ಸ್ವಾವಲಂಬಿಗಳಾಗಿ ಬದುಕಲು ನೆರವಾಗು ತಾಗಬೇಕು ಎಂದು ಶಾಂತರಾಮ ಶೆಟ್ಟಿ ಶುಭ ಹಾರೈಸಿದರು.
ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಭಾಪತಿ ಸಿ.ಎ. ಶಾಂತರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ಸಮಾಜದಲ್ಲಿ ವಿವಿಧ ಕಾರಣಗಳಿಂದ ವಿಕಲಾಂಗರಾಗುವ ಸಂದರ್ಭದಲ್ಲಿ ಅವರನ್ನು ಅವಲಂಬಿಸಿ ಕೊಂಡಿರುವವರು ಸಂಕಷ್ಟಕ್ಕೆ ಈಡಾಗುತ್ತಾರೆ. ಈ ಸಂದರ್ಭದಲ್ಲಿ ಅಂತವರಿಗೆ ಸಹಕಾರದ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಂಘಟಿತರಾಗಿ ಪರಸ್ಪರ ಸಹಕಾರ ನೀಡುವ ನಿಟ್ಟಿನಲ್ಲಿ ವಿಶಿಷ್ಟ ಚೇತನರ ಸಂಘದ ಕೆಲಸ ಮಹತ್ವಪೂರ್ಣವಾಗಿದೆ ಎಂದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಸಕ ವೇದವ್ಯಾಸ ಕಾಮತ್ ಭಾಗವಹಿಸಿ ಮಾತನಾಡುತ್ತಾ, ದಿವ್ಯಾಂಗ ರಾದ ವ್ಯಕ್ತಿಗಳು ಸಮಾಜದ ಮುಖ್ಯವಾಹಿಗೆ ಬರಲು ಸಂಘದ ವತಿಯಿಂದ ನಢಯುತ್ತಿರುವುದು ಮತ್ತು ಅದಕ್ಕೆ ರೆಡ್ಕ್ರಾಸ್ನಂತಹ ಇತರ ಸಂಘಟನೆಗಳು ಬೆಂಬಲ ನೀಡುತ್ತಿರುವುದು ಶ್ಲಾಘನೀಯ. ಸಮಾಜದಲ್ಲಿ ವಿಕಲಚೇತನರು ತಮ್ಮ ಆತ್ಮಬಲದಿಂದ ಮಾಡುತ್ತಿರುವ ಸಾಧನೆ ಇತರರಿಗೆ ಸ್ಪೂರ್ತಿ ಎಂದರು.
ಸಮಾರಂಭದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಡಾ.ಗಣಪತಿ ಗೌಡ, ವೆನ್ಲಾಕ್ ರೆಡ್ಕ್ರಾಸ್ ವಿಕಲಾಂಗ ಕೋಶದ ಅಧ್ಯಕ್ಷ ಡಾ.ಕೆ.ಆರ್.,ಮಂಗಳೂರು ವಿಶ್ವ ವಿದ್ಯಾನಿಲಯದ ಯುವ ರೆಡ್ ಕ್ರಾಸ್ ವಿಭಾಗದ ನೋಡಲ್ ಅಧಿಕಾರಿ ಡಾ. ಗಾಯತ್ರಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ವಿಶಿಷ್ಟ ಚೇತನರ ಸಂಘದ ಅಧ್ಯಕ್ಷ ಡಾ.ವಿ. ಮುರಳೀಧರ ಸ್ವಾಗತಿಸಿದರು.
ಪ್ರದಾನ ಕಾರ್ಯದರ್ಶಿ ಜಯಪ್ರಕಾಶ್ ಫಲಾನುಭವಿಗಳ ವಿವರ ನೀಡಿದರು. ಸಮಾರಂಭದಲ್ಲಿ ಅತಿಥಿಗಳು ವಿಕಲಾಂಗರಿಗೆ ನೆರವು, ವಿದ್ಯಾರ್ಥಿ ವೇತನ ಕಾರ್ಯಕ್ರಮ ನೆರವೇರಿಸಿದರು.ದಿನಮಣಿ ರಾವ್ ಕಾರ್ಯಕ್ರಮ ನಿರೂಪಿಸಿದರು. ನಾಗೇಶ್ ಶೆಟ್ಟಿ ವಂದಿಸಿದರು. ಇದೇ ಸಂದರ್ಭದಲ್ಲಿ ವಿಕಲಾಂಗ ಚೇತನರಿಗೆ ಉಚಿತ ಆರೋಗ್ಯ ತಪಾಸಣೆ ನಡೆಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ