ಇಂದು ಸಕ್ಷಮ ಸ್ಥಾಪನಾ ದಿನಾಚರಣೆ

Upayuktha
0


ಮಂಗಳೂರು: ಸಕ್ಷಮ ದ.ಕ ಜಿಲ್ಲಾ ಘಟಕ ಹಾಗೂ ಶ್ರೀ ಭಾರತೀ ಸಮೂಹ ಸಂಸ್ಥೆಗಳು ನಂತೂರು ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಅಪರಾಹ್ನ 2:00 ಗಂಟೆಗೆ ಸಕ್ಷಮ ಸ್ಥಾಪನಾ ದಿನಾಚರಣೆ, ವಿಶ್ವ ಪರಸರ ದಿನಾಚರಣೆ ಮತ್ತು ಹೆಲೆನ್ ಕೆಲರ್ ದಿನಾಚರಣೆ ಆಯೋಜಿಸಲಾಗಿದೆ.


ಶ್ರೀ ಭಾರತೀ ಸಮೂಹ ಸಂಸ್ಥೆಗಳ ಕಾರ್ಯಾಧ್ಯಕ್ಷ ಗಣೇಶ್ ಮೋಹನ್ ಕಾಶಿಮಠ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಕ್ಷಮ ದ.ಕ ಜಿಲ್ಲಾ ಘಟಕ ಅಧ್ಯಕ್ಷ ರಾಜಶೇಖರ್ ಭಟ್ ಕಾಕುಂಜೆ ಅಧ್ಯಕ್ಷತೆ ವಹಿಸಲಿದ್ದಾರೆ.


ಮುಖ್ಯ ಅತಿಥಿಯಾಗಿ ರೋಮನ್ & ಕ್ಯಾಥರೀನ್ ಲೋಬೋ ಅಂಧ ಮಕ್ಕಳ ವಸತಿ ಶಾಳೆಯ ಪ್ರಾಂಶುಪಾಲ ಕ್ಯಾಲಿಸ್ಟಸ್ ಡೇಸಾ, ಶ್ರೀ ಭಾರತೀ ಸಮೂಹ ಸಂಸ್ಥೆಗಳ ನಿರ್ದೇಶಕ ಗಿರೀಶ್ ಎಂ ಮುಖ್ಯ ಅತಿಥಿಗಳಾ ಪಾಲ್ಗೊಳ್ಳುತ್ತಾರೆ.


ಕಾಲೇಜಿನ ಪ್ರಾಂಶುಪಾಲರಾದ ಗಂಗಾರತ್ನ, ಸಕ್ಷಮ ದ. ಕ ಜಿಲ್ಲಾ ಘಟಕದ ಕಾರ್ಯಧರ್ಶಿ ಹರೀಶ್ ಪ್ರಭು ಗೌರವ ಉಪಸ್ಥಿತರಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top