ವೆಟ್‌ವೆಲ್‌ಗೆ ಅಪಾಯವಾಗದಂತೆ ಎಚ್ಚರಿಕೆ ವಹಿಸಲು ಶಾಸಕ ಡಾ. ಭರತ್ ಶೆಟ್ಟಿ ಸೂಚನೆ

Upayuktha
0


ಮಂಗಳೂರು: ಕರ್ನಾಟಕ ಅರ್ಬನ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಆ್ಯಂಡ್ ಫೈನಾನ್ಸ್ ಕಾರ್ಪೊರೇಶನ್ (ಕೆಯುಐಡಿಎಫ್‌ಸಿ) ಮೂಲಕ ಸುಮಾರು 10 ಕೋಟಿ ರೂಪಾಯಿ ವೆಚ್ಚದಲ್ಲಿ ತಿರುವೈಲು ವಾರ್ಡ್‌ನಲ್ಲಿ ನಿರ್ಮಿಸುತ್ತಿರುವ ವೆಟ್‌ವೆಲ್ ಪ್ರಾಜೆಕ್ಟ್‌ಗೆ ಕೆತ್ತಿಕಲ್ ಗುಡ್ದದ ಮಣ್ಣುಗಾರಿಕೆ ಯಿಂದ ಅಪಾಯ ಎದುರಾಗಿದ್ದು, ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಜೂ. 26ರಂದು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವೆಟ್ ವೆಲ್ ಗೆ ಅಪಾಯವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಿದರು.


ಶಾಸಕರೊಂದಿಗೆ ಕೆಯುಐಡಿಎಫ್‌ಸಿ ಕಾರ್ಯಕಾರಿ ಇಂಜಿನಿಯರ್ ಸುರೇಶ್, ಎಡಬ್ಲ್ಯೂ ವೆಂಕಟರಮಣ, ಕನ್ಸಲ್ಟೆಂಟ್ ಜಯಪ್ರಕಾಶ್, ಯೋಜನೆಯ ಗುತ್ತಿಗೆದಾರ ಸಂಸ್ಥೆಯ ಪ್ರಾಜೆಕ್ಟ್ ಮ್ಯಾನೇಜರ್ ಸಂತೋಷ್ ಮತ್ತಿತರರು ಇದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top