ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ, ಬಿಸಿ ಟ್ರಸ್ಟ್ (ರಿ) ವಿಟ್ಲ ಅಳಿಕೆ ವಲಯ: ಪರಿಸರ ದಿನಾಚರಣೆ

Upayuktha
0


ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ವಿಟ್ಲ ಇದರ ಅಳಿಕೆ ವಲಯದ ವತಿಯಿಂದ ಪರಿಸರ ದಿನಾಚರಣೆ ಹಾಗೂ ಗಿಡ ನಾಟಿ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ತೋರಣಕಟ್ಟೆ ಇಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ವಹಿಸಿದರು.


ಬಂಟ್ವಾಳ ತಾಲೂಕು ಶಿಕ್ಷಕರ ಸಂಘದ ಕಾರ್ಯದರ್ಶಿ ಯತೀಶ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಶಿಕ್ಷಕರ ಕೊರತೆಯಿದ್ದ ಶಾಲೆಗೆ ಜ್ಞಾನದೀಪ ಶಿಕ್ಷಕರನ್ನು ನೇಮಕ ಮಾಡಿ ಸರಕಾರಿ ಶಾಲೆಗಳ ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಪರಿಸರ ಕಾರ್ಯಕ್ರಮವಾಗಿ ನೆಟ್ಟು ಕೊಟ್ಟಂತಹ ಗಿಡವನ್ನು ಸಂರಕ್ಷಿಸುವ ಕೆಲಸವನ್ನು ಶಾಲೆಯ ಮಕ್ಕಳು, ಶಿಕ್ಷಕರು, ಪೋಷಕರು ಮಾಡಬೇಕೆಂದು ತಿಳಿಸಿದರು.


ತಾಲೂಕಿನ ಕೃಷಿ ಅಧಿಕಾರಿ ಚಿದಾನಂದ ಪರಿಸರದ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು. ಮಕ್ಕಳಿಗೆ ಪರಿಸರದ ಬಗ್ಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ  ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.


ಸೀತು ದೇವಿನಗರ ಇವರಿಗೆ ಯೋಜನೆಯ ಜನಮಂಗಳ ಕಾರ್ಯಕ್ರಮದಿಂದ ಮಂಜೂರಾದ ಯು ಶೇಪ್‌ ವಾಕರ್ ನ್ನು ಈ ಸಂಧರ್ಭದಲ್ಲಿ ವಿತರಣೆ ಮಾಡಲಾಯಿತು. ಶಾಲಾ ಆವರಣದಲ್ಲಿ ಗಿಡ ನಾಟಿ ಮಾಡಲಾಯಿತು.


ಶಾಲಾ ಮುಖ್ಯ ಶಿಕ್ಷಕಿ ಲೀಲಾವತಿ, ಶಾಲಾ ಶಿಕ್ಷಕ ವೃಂದ, ಒಕ್ಕೂಟದ ಅಧ್ಯಕ್ಷ ರಘು ನಾಯ್ಕ, ಒಕ್ಕೂಟದ ಪದಾಧಿಕಾರಿಗಳು, ಮಕ್ಕಳ ಪೋಷಕರು, ವಿಪತ್ತು ನಿರ್ವಹಣ ಘಟಕದ ಪ್ರತಿನಿದಿ ದೀಪಕ್, ಶೌರ್ಯದ ತಂಡದ ಸದಸ್ಯರು, ಸ್ಥಳಿಯ ಸೇವಾಪ್ರತಿನಿಧಿ ಸರಸ್ವತಿ, ಶರ್ಮಿಳಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಒಕ್ಕೂಟದ ಪದಾಧಿಕಾರಿ ಅಮಿತರವರು ಸ್ವಾಗತಿಸಿ, ಅಳಿಕೆ ವಲಯ ಮೇಲ್ವಿಚಾರಕಿ ಮಾಲತಿ ಪ್ರಾಸ್ತಾವಿಕ ಮಾಡಿ ಪುಣಚ ಬಿ, ಸಿಎಸ್‌ಸಿ ಕೇಂದ್ರದ ವಿಎಲ್ ಎ ಭವ್ಯ ವಂದಿಸಿ, ಶೌರ್ಯ ವಿಪತ್ತು ನಿರ್ವಹಣ ಘಟಕದ ಸಂಯೋಜಕಿ ರೂಪ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top