ಪುತ್ತೂರು: ಸ್ಮರಣ ಶಕ್ತಿ ಹೆಚ್ಚಿಸಿಕೊಳ್ಳಲು, ಏಕಾಗ್ರತೆಗಾಗಿ, ಶಾರೀರಿಕ , ಮಾನಸಿಕ ಆರೋಗ್ಯಕ್ಕೆ ಯೋಗ ಅತ್ಯಾವಶ್ಯಕ. ಮನಸ್ಸು ಮತ್ತು ಉಸಿರಾಟದ ಮಧ್ಯೆ ಸಂಬಂಧ ಇದೆ, ಮನಸ್ಸನ್ನು ಹಿಡಿತದಲ್ಲಿಟ್ಟುಕೊಳ್ಳಲು ಯೋಗ ಅಗತ್ಯ. ಯೋಗದ ಯಾವುದೇ ಪ್ರಕಾರಗಳಿರಲಿ ಆಸನ, ಪ್ರಾಣಾಯಾಮ, ಏಕಾಗ್ರತೆಯೊಂದಿಗೆ ಮಾಡುವ ಧ್ಯಾನ ಎಲ್ಲದರಲ್ಲೂ ಮೂಲವಾಗಿರುವಂತಹದ್ದು ಉಸಿರಾಟ. ಉಸಿರಾಟ ಶರೀರದ ಎಲ್ಲ ಕೆಲಸಗಳನ್ನು ನಿಯಂತ್ರಿಸುವುದು, ಶರೀರ ಮತ್ತು ಮನಸ್ಸಿನ ಏರುಪೇರನ್ನು ನಿಯಂತ್ರಿಸುವುದು. ಯೋಗವು ಆಸನ, ಪ್ರಾಣಾಯಾಮ, ಧ್ಯಾನ, ಆಹಾರ ಪದ್ಧತಿ, ಜೀವನ ಶೈಲಿ ಎಲ್ಲವನ್ನು ಒಳಗೊಂಡಿರುವುದು ಎಂದು ಯೋಗಾರೋಗ್ಯ ಸಂಸ್ಥೆಯ ಚಿಕಿತ್ಸಕ, ಯೋಗ ತಜ್ಞ ಡಾ. ಉದಯ ಮಕ್ಕಳಿಗೆ ಯೋಗದ ಮಹತ್ವವನ್ನು ತಿಳಿಸಿದರು.
ಅವರು ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ, ನೆಲ್ಲಿಕಟ್ಟೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮಹತ್ವವನ್ನು ತಿಳಿಸಿದರು.
ಯೋಗದಿಂದ ರೋಗ ನಿವಾರಣೆ ಖಂಡಿತ ಸಾಧ್ಯ, ಏಕೆಂದರೆ ಕಾರಣ ಕಂಡುಹಿಡಿದು ಆರೋಗ್ಯ ಸಮಸ್ಯೆಯನ್ನು ನಿವಾರಿಸುವುದು ಯೋಗದಿಂದ ಸಾಧ್ಯ. ಎಲ್ಲರೂ ಇದನ್ನ ರಿತು ಯೋಗ ಮಾಡಿ. ವಿಶ್ವದ 177 ದೇಶಗಳು ವಿಶ್ವ ಯೋಗ ದಿನವನ್ನು ಆಚರಿಸುವ ಸಲಹೆಗೆ ಒಮ್ಮತದಿಂದ ಒಪ್ಪಿಗೆ ನೀಡಿರುವಂತಹದ್ದು ಐತಿಹಾಸಿಕ ದಾಖಲೆಯಾಗಿದೆ. ಎಲ್ಲರಿಗೂ ವಿಶ್ವ ಯೋಗ ದಿನದ ಶುಭಾಶಯಗಳು ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಉಪಸ್ಥಿತರಿದ್ದು ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿ, ಸ್ಮರಣೆಕೆ ನೀಡಿ ಗೌರವಿಸಿದರು. ಸಭೆಯಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಉಪಸ್ಥಿತರಿದ್ದರು. ಉಪನ್ಯಾಸಕಿ ವರ್ಷಾ ಮೊಳೆಯಾರ ಕಾರ್ಯಕ್ರಮ ನಿರೂಪಿಸಿದರು. ಪ್ರಯೋಗಾಲಯ ಸಹಾಯಕ ಮುರಳಿ ಮೋಹನ್ ಸಹಕರಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


