ಮಂಗಳೂರು: ನಗರದ ಅಮೃತ ವಿದ್ಯಾಲಯ ಶಾಲೆಯಲ್ಲಿ ದಿನಾಂಕ 18/6/24 ರಂದು ನೂತನವಾಗಿ ರಚನೆಗೊಂಡ ವಿದ್ಯಾರ್ಥಿ ಮಂತ್ರಿ ಮಂಡಲದ ಪದಗ್ರಹಣ ಸಮಾರಂಭ ಮತ್ತು ವಿವಿಧ ಸಂಘಗಳ ಉದ್ಘಾಟನೆ ಕಾರ್ಯಕ್ರಮವು ನಡೆಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಲೆಫ್ಟಿನೆಂಟ್ ಕರ್ನಲ್ ವಿವೇಕ್ ಬಿಂದ್ರ, ಅಮೃತ ಕ್ಯಾಂಪಸ್ಸಿನ ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಶಾಲಾ ಪ್ರಾಂಶುಪಾಲೆ ಶ್ರೀಮತಿ ಅಕ್ಷತಾ ಆರ್ ಶೆಣೈ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ವಿದ್ಯಾರ್ಥಿ ಮಂತ್ರಿಮಂಡಲಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ತಮ್ಮ ಕರ್ತವ್ಯಗಳನ್ನು ನಿಷ್ಠೆಯಿಂದ ಮಾಡಿ, ಶಾಲಾ ಕೀರ್ತಿ ಪತಾಕೆಯನ್ನು ಗಗನ್ನೆತ್ತರಕ್ಕೆ ಹಾರಿಸುವುದಾಗಿ ಪ್ರತಿಜ್ಞೆ ಮಾಡಿದರು. ಕವನ, ರಸಪ್ರಶ್ನೆಗಳ ಮೂಲಕ ವಿವಿಧ ಸಂಘಗಳಾದ ಉನ್ನತಿ, ಪ್ರಕೃತಿ, ಗಣಿತ ಸಂಘಗಳು ತಮ್ಮ ತಮ್ಮ ಸಂಘಗಳ ಧ್ಯೇಯ ಉದ್ದೇಶಗಳನ್ನು ಪ್ರಸ್ತುತಪಡಿಸಿದರು.
ಮುಖ್ಯ ಅತಿಥಿಗಳು ಶಾಲೆ ಎಂಬುದು ಕೇವಲ ಶಿಕ್ಷಣ ನೀಡುವ ಸಂಸ್ಥೆಯಾಗದೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ನೆರವಾಗುವಂತಹದ್ದು ಆಗಿರಬೇಕೆಂದು ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ದೇಶ, ಧೈರ್ಯ, ಸತ್ಯ, ಮೌಲ್ಯ ಎಂಬ ಗುರು ಮಂತ್ರವನ್ನು ಬೋಧಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಈ ಕಾರ್ಯಕ್ರಮದ ನಿರೂಪಣೆಯನ್ನು ಶಾಲಾ ವಿದ್ಯಾರ್ಥಿನಿ ಕುಮಾರಿ ಪ್ರಜ್ಞ ನೆರವೇರಿಸಿದರು. ಶಾಲಾ ನಾಯಕ ಜಿಶಿತ್, ನಾಯಕಿ ಅಮೃತ ಪ್ರಿಯ, ಶಾಲಾ ಶಿಕ್ಷಕ - ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


