ಕರದಾಳು ಶಕ್ತಿ ಪೀಠದ ಅಭಿವೃದ್ಧಿಗೆ ಶ್ರಮಿಸುವೆ: ಮಾಲಿಕಯ್ಯ ಗುತ್ತೇದಾರ್

Upayuktha
0


ಚಿತ್ತಾಪುರ: ತಾಲೂಕಿನ ಕರದಾಳದಲ್ಲಿರುವ ಈಡಿಗ ಸಮುದಾಯದವರ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಅಭಿವೃದ್ಧಿಗೆ ಸೂಕ್ತ ನೆರವು ಧರಿಸಲು ಪ್ರಯತ್ನಿಸುವುದಾಗಿ ಮಾಜಿ ಸಚಿವರು ಹಾಗೂ ಹಿರಿಯ ಮುಖಂಡರಾದ ಮಾಲೀಕಯ್ಯ ವಿ ಗುತ್ತೇದಾರ್ ಹೇಳಿದರು. 


 ಕಲ್ಯಾಣ ಕರ್ನಾಟಕದಲ್ಲಿ ಈಡಿಗ ಸಮುದಾಯದವರಿಗಾಗಿ ಪೂಜ್ಯ ಡಾ. ಪ್ರಣವಾನಂದ ಸ್ವಾಮೀಜಿ ಅವರು ಕರದಾಳು ಗ್ರಾಮದಲ್ಲಿ ನಿರ್ಮಾಣ ಮಾಡಲು ಸಂಕಲ್ಪ ಮಾಡಿದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠಕ್ಕೆ ಶುಕ್ರವಾರ (ಜೂನ್ 28) ಭೇಟಿ ನೀಡಿ ಚಿತ್ತಾಪುರ ತಾಲೂಕು ಈಡಿಗ ಮುಖಂಡರ ಜೊತೆ ಸಮಾಲೋಚನೆ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು. ಶಕ್ತಿ ಪೀಠದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಯ ಸಿದ್ದರಾಮಯ್ಯ ಹಾಗೂ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆ ಅವರನ್ನು ಕೂಡಲೇ ಭೇಟಿ ಮಾಡಿ ಅಭಿವೃದ್ಧಿ ಕೆಲಸ ಕೈಗೊಳ್ಳಲು ಆರ್ಥಿಕ ನೆರವು ನೀಡುವಂತೆ ಒತ್ತಾಯಿಸಲಾಗುವುದು ಸಮುದಾಯದ ಜನರ ಸರ್ವಾಂಗೀಣ ಅಭಿವೃದ್ಧಿಗಾಗಿ ನಾರಾಯಣ ಗುರುಗಳ ತತ್ವ ಸಂದೇಶ ಪಾಲನೆ ಮಾಡುವಂತಾಗಲು ಶಕ್ತಿ ಪೀಠದಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲು ಅನುಕೂಲವಾಗುವಂತೆ ಅಭಿವೃದ್ಧಿ ಕೆಲಸವನ್ನು ಪ್ರಾರಂಭಿಸಲಾಗುವುದು . ಪೂಜ್ಯಶ್ರೀಗಳ ಹಾಗೂ ಮುಖಂಡರ ಜೊತೆ ಚರ್ಚಿಸಿ ಕೈಗೊಳ್ಳುವ ರೂಪರೇಷೆಗಳಿಗೆ ಪೂರ್ಣ ಸಹಕಾರ ನೀಡುವುದಾಗಿ ಮಾಲಿಕಯ್ಯ ಗುತ್ತೇದಾರ್ ಭರವಸೆ ನೀಡಿದರು. 


 ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಶಕ್ತಿಪೀಠದಲ್ಲಿ ಮಾಲಿಕಯ್ಯ ಗುತ್ತೇದಾರ್ ಅವರಿಗೆ ಮೈಸೂರು ಪೇಟ ಹಾಗೂ ಶಾಲು ತೊಡಿಸಿ ವಿಶೇಷ ಸನ್ಮಾನ ನೆರೆವೇರಿಸಿದರು. ಸಮಾಲೋಚನಾ ಸಭೆಯಲ್ಲಿ ತಾಲೂಕು ಈಡಿಗ ಸಮಾಜದ ಮುಖಂಡರಾದ ನಾಗಯ್ಯ ಗುತ್ತೇದಾರ್, ಕರದಾಳು ಶ್ರೀಮಂತ ಗುತ್ತೇದಾರ್, ರಾಷ್ಟ್ರೀಯ ಈಡಿಗ ಮಹಾಮಂಡಳಿಯ ತಾಲೂಕ ಅಧ್ಯಕ್ಷರಾದ ರಾಜು ಗುತ್ತೇದಾರ್ ಬೊಮ್ಮನಹಳ್ಳಿ, ಶಕ್ತಿಪೀಠ ಸಾನಿಧ್ಯದ ಅಧ್ಯಕ್ಷರಾದ ಬಸವರಾಜ್ ಗುತ್ತೇದಾರ್, ಕರದಾಳು ನರಸಯ್ಯ ಗುತ್ತೇದಾರ್ ಅಳ್ಳೊಳ್ಳಿ, ಹನುಮಯ್ಯ ಲಾಡಲಾಪುರ, ಲಕ್ಷ್ಮಿಕಾಂತ್ ಗುತ್ತೇದಾರ್, ಹಾಗೂ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top