ಸಮ್ಮೇಳನಾಧ್ಯಕ್ಷರಾಗಿ ಜಯಾನಂದ ಪೆರಾಜೆ ಆಯ್ಕೆ
ಪುತ್ತೂರು: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿಯ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ನಡೆಯಲಿರುವ ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ, ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆಯಾಗಿದ್ದಾರೆ.
ಸಮ್ಮೇಳನವು ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಸಂಗಮ ಘಟಕದ ಅಧ್ಯಕ್ಷ ಆದಿರಾಜ ಜೈನ್ ನೇತೃತ್ವದಲ್ಲಿ ಆಯೋಜಿಸಿದ್ದು ಬಿ.ಸಿ. ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ಆಗಸ್ಟ್ 4ರಂದು ನಡೆಯಲಿದೆ. ಕಾರ್ಯಕ್ರಮದಲ್ಲಿ ಕೃಷ್ಣಮೂರ್ತಿ ಕುಲಕರ್ಣಿ ರಾಜ್ಯ ಸಂಚಾಲಕರು ಕ.ಚು.ಸಾ.ಪ. ಕೇಂದ್ರ ಸಮಿತಿ ಹುಬ್ಬಳ್ಳಿ ದೀಪಪ್ರಜ್ವಲನೆ ಮಾಡುವರು.
ಮುಖ್ಯ ಅತಿಥಿಯಾಗಿ Snr ಆದಿರಾಜ ಜೈನ್ ಅಧ್ಯಕ್ಷ ರು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಬಂಟ್ವಾಳ ನೇತ್ರಾವತಿ ಸಂಗಮ,ಹಾಗೂ ಅಭ್ಯಾಗತರಾಗಿ ಕ.ಚು.ಸಾ.ಪ. ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಶಾಂತಾ ಪುತ್ತೂರು, ಕ.ಚು.ಸಾ.ಪ ಉಡುಪಿ ಜಿಲ್ಲಾಧ್ಯಕ್ಷ ಜಿ.ಯು. ನಾಯಕ, ಕ.ಚು.ಸಾ.ಪ.ಹಾವೇರಿ ಪ್ರಧಾನ ಕಾರ್ಯದರ್ಶಿ ಗಂಗಯ್ಯ ಕುಲಕರ್ಣಿ, ಸ್ವಾಗತ ಸಮಿತಿ ಅಧ್ಯಕ್ಷ ಸುಭಾಷ್ ಚಂದ್ರ ಜೈನ್ ಉಪಸ್ಥಿತರಿರುವರು.
ಜನಾರ್ದನ ವಾಸುದೇವ ಭಟ್ ಮೊಗರ್ನಾಡುರವರಿಗೆ ಕರ್ನಾಟಕ ಚುಟುಕು ರತ್ನ ಪ್ರಶಸ್ತಿ, ಜಯಾನಂದ ಪೆರಾಜೆಯವರಿಗೆ ಚುಟುಕು ಚೇತನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸಮ್ಮೇಳನದಲ್ಲಿ ಸಾಹಿತ್ಯ ಗೋಷ್ಠಿಗಳಿದ್ದು ಅದರ ಅಧ್ಯಕ್ಷ ತೆಯನ್ನು ಮಹಾಬಲೇಶ್ವರ ಹೆಬ್ಬಾರ್ ಮೊಡಂಕಾಪು ವಹಿಸಲಿದ್ದು ವಾಮನ್ ರಾವ್ ಬೇಕಲ್ ಕಾಸರಗೋಡು ಗ್ರಂಥಾಲಯದ ಮಹತ್ವದ ಬಗ್ಗೆ ಹಾಗೂ ವಿ.ಬಿ.ಕುಳಮರ್ವರವರು ಚುಟುಕು ಸಾಹಿತ್ಯದ ಬಗ್ಗೆ ವಿಚಾರ ಮಂಡಿಸಲಿದ್ದಾರೆ.
ಯೋಧ ನಮನದಲ್ಲಿ ಹವಾಲ್ದಾರ್ ಕೃಷ್ಣಯ್ಯ ಕೆ ಅವರನ್ನು ಗೌರವಿಸಲಾಗುವುದು. ಡಾ. ವಾಣಿಶ್ರೀ ಕಾಸರಗೋಡು ನೇತೃತ್ವದ ಗಡಿನಾಡು ಸಾಂಸ್ಕೃತಿಕ ಸಂಘರವರಿಂದ ಸಾಹಿತ್ಯ ಗಾನ ನೃತ್ಯ ವೈಭವ ನಡೆಯಲಿದೆ. ನಂತರ ಕವಿಗೋಷ್ಠಿ ನಡೆಯಲ್ಲಿದ್ದು ನಾಡಿನ ಪ್ರತಿಭಾನ್ವಿತ ಕವಿಗಳು ಚುಟುಕು, ಕವನ ವಾಚಿಸಲಿರುವರು. ಹಿರಿಯ ಪತ್ರಕರ್ತ ರೇಮಂಡ್ ಡಿಕುನ್ಹ ತಾಕೊಡೆ ಶುಭ ಹಾರೈಸಲಿದ್ದು, ಮಂಗಳೂರಿನ ವೈದ್ಯ, ಸಾಹಿತಿ ಡಾ.ಸುರೇಶ್ ನೆಗಳಗುಳಿ ಸಮಾರೋಪ ಭಾಷಣ ಮಾಡಲಿರುವರು. ಸತ್ಯಶಾಂತ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷೆ ಶ್ರೀಮತಿ ಶಾಂತಾ ಕುಂಟಿನಿ ಸಾರಥ್ಯದಲ್ಲಿ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಾಂತಾ ಪುತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ