ಶ್ರೀ ಭುವನೇಂದ್ರ ಹಾಲ್‌ನಲ್ಲಿ ಕೆನರಾ ನಂದಗೋಕುಲ್ ಹುಲಿ ದಿನಾಚರಣೆ

Upayuktha
0

ಮಂಗಳೂರು: ಕೆನರಾ ನಂದಗೋಕುಲ್ ತಂಡವು ಶ್ರೀ ಭುವನೇಂದ್ರ ಸಭಾಭವನದಲ್ಲಿ ಹುಲಿಯ ದಿನವನ್ನು ವಿಜೃಂಭಣೆಯಿಂದ ಆಚರಿಸಿತು. ಮಕ್ಕಳು ಹುಲಿವೇಷ ಧರಿಸಿ  ಎಲ್ಲರ ಗಮನ ಸೆಳೆದರು. ಕೆಲವು ಮಕ್ಕಳು ಹುಲಿಗಳ ಬಗ್ಗೆ ಭಾವನಾತ್ಮಕ ಭಾಷಣಗಳನ್ನು ನೀಡಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು.


ಈ ಸಂದರ್ಭದಲ್ಲಿ "ಹುಲಿಗಳನ್ನು ರಕ್ಷಿಸಿ, ಪ್ರಕೃತಿಯನ್ನು ಉಳಿಸಿ" ಎಂಬ ಘೋಷಣೆ ಕೇಳಿಬಂತು. ಪುಣ್ಯಕೋಟಿ ಎಂಬ ಪ್ರಸಿದ್ಧ ನಾಟಕವನ್ನು ಮಕ್ಕಳು ಅಭಿನಯ ಮಾಡಿ, ಪ್ರೇಕ್ಷಕರಿಗೆ ಮನರಂಜನೆ ಜೊತೆಗೆ ನೈತಿಕ ಪಾಠವನ್ನೂ ನೀಡಿದ್ದಾರೆ. ಹೆಮ್ಮೆಯ ಹುಲಿ ನೃತ್ಯ ಪ್ರದರ್ಶನ ಕಾರ್ಯಕ್ರಮದ ಮತ್ತೊಂದು ವಿಶೇಷ ಆಕರ್ಷಣೆ ಆಗಿತ್ತು.


ಈ ಕಾರ್ಯಕ್ರಮದಲ್ಲಿ ಕೆನರಾ ನಂದಗೋಕುಲ್ ಮತ್ತು ಕೆನರಾ ಇಂಟರ್‌ನ್ಯಾಷನಲ್ ಶಾಲೆಯ ನಿರ್ದೇಶಕಿ ಶ್ರೀಮತಿ ಅಂಜನಾ ಕಾಮತ್, ಸಂಯೋಜಕಿ ಶ್ರೀಮತಿ ವಂದನಾ, ಮತ್ತು ಶಿಕ್ಷಕ/ಶಿಕ್ಷಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top