ಮಡಿಕೇರಿ: ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಸಂಘ. ಕೊಡಗು ಇದರ ಮಾಸಿಕ ಸಭೆಯು ನೂತನ ಜಿಲ್ಲಾಧ್ಯಕ್ಷ ಕೆ. ಕುಶಾಲಪ್ಪ ಅವರ ಅಧ್ಯಕ್ಷತೆಯಲ್ಲಿ ಮದಲಾಪುರ ಶ್ರೀ ಬಸವೇಶ್ವರ ದೇವಸ್ಥಾನದ ಸಭಾಭವನದಲ್ಲಿ ಭಾನುವಾರ (ಜು.14) ನಡೆಯಿತು.
ಹಲವು ವರ್ಷಗಳ ನಂತರ ನವೀಕರಣಗೊಂಡ ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಸಂಘವು ಇದೀಗ ನೂತನ ಆಡಳಿತ ಮಂಡಳಿಯೊಂದಿಗೆ ಪ್ರಥಮ ಮಾಸಿಕ ಸಭೆ ಇದಾಗಿದೆ. ಶ್ರೀನಿವಾಸ್ ಮಡಿಕೆಬೀಡು ಅವರ ಪ್ರಾರ್ಥನೆಯೊಂದಿಗೆ ಸಭೆ ಪ್ರಾರಂಭವಾಯಿತು.
ಪ್ರಾಸ್ತಾವಿಕ ಭಾಷಣ ಮಾಡಿದ ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಸಂಘದ ಕಾರ್ಯದರ್ಶಿ ಅರುಣ್ ಕುಮಾರ್ ಕೂಡಿಗೆ, ಜಿಲ್ಲೆಯ ಕುಲಬಾಂಧವರ ಕಷ್ಟ ಕಾರ್ಪಣ್ಯಕ್ಕೆ ನೆರವಾಗಲು ಸಂಘ ಸನ್ನದ್ಧವಾಗಿದೆ. ಆ ಮೂಲಕ ಜಿಲ್ಲೆಯ ಕುಲಬಾಂಧವರಿಗೆ ಹಲವು ಯೋಜನೆಗಳನ್ನು ರೂಪಿಸಲು ಕಾರ್ಯೋನ್ಮುಖರಾಗಿದ್ದೇವೆ. ಇದಕ್ಕಾಗಿ ಜಿಲ್ಲೆಯ ಕುಲಾಲ ಕುಂಬಾರ ಸಮಾಜದ ಬಂಧುಗಳು ಸಂಘದ ಸದಸ್ಯತ್ವವನ್ನು ಪಡೆಯಬೇಕು ಆ ಮೂಲಕ ಸಂಘವನ್ನು ಬಲಪಡಿಸಬೇಕೆಂದು ಕರೆ ನೀಡಿದರು.
ನಂತರ ಮಾತನಾಡಿದ ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಸಂಘದ ನೂತನ ಜಿಲ್ಲಾಧ್ಯಕ್ಷ ಕೆ. ಕುಶಾಲಪ್ಪ ಅವರು, ಸಂಘ ಹಲವು ವರ್ಷಗಳಿಂದ ನಿಷ್ಕ್ರಿಯಗೊಂಡಿದ್ದು ಇದೀಗ ಹೊಸ ಆಡಳಿತ ಮಂಡಳಿಯ ಮುಂದಾಳತ್ವದಲ್ಲಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ಸೌಲಭ್ಯವನ್ನು ಒದಗಿಸಲು, ಅನುಕೂಲ ಮಾಡಲು ಸಂಘ ಕಟ್ಟಿಬದ್ಧವಾಗಿದೆ. ಆ ಮೂಲಕ ಜಿಲ್ಲೆಯ ಕುಲಾಲ ಕುಂಬಾರ ಸಮಾಜದ ಬಂಧುಗಳು ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘವನ್ನು ಬಲಪಡಿಸಬೇಕಾಗಿದೆ. ಮುಂದಿನ ದಿನಗಳಲ್ಲಿ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಬಂಧುಗಳಿಗೆ ಅಪಘಾತ ಪರಿಹಾರ, ಮರಣ ಫಂಡ್ ಇಂತಹ ಹಲವು ಯೋಜನೆಗಳು ಕಾರ್ಯಗತಗೊಳ್ಳಲಿವೆ ಎಂದರು.
ಸಮಾಜದ ಬಂಧುಗಳಿಗೆ ಕ್ರೀಡೋತ್ಸವ ಮಾಡುವ ಬಗ್ಗೆಯೂ ಶೀಘ್ರದಲ್ಲಿ ದಿನಾಂಕ ಪ್ರಕಟಿಸಲಾಗು ವುದು. ಎಲ್ಲಾ ಸಮಾಜಮುಖಿ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಪೂರ್ಣ ಸಹಕಾರ ಅಗತ್ಯವಿದೆ. ಎಲ್ಲರ ಸಹಕಾರದಿಂದ ಮಾತ್ರ ಇದು ಸಾಧ್ಯ. ಜಿಲ್ಲೆಯ ಸರ್ವ ಕುಲಾಲ ಕುಂಬಾರ ಸಮಾಜದ ಬಂಧುಗಳು ಪೂರ್ಣ ಪ್ರಮಾಣದಲ್ಲಿ ಸಂಘದ ಏಳಿಗೆಗಾಗಿ ಶ್ರಮಿಸಿ ಆ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಶ್ರಮಿಸೋಣ ಎಂದು ಕರೆ ನೀಡಿದರು.
ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಉಪಾಧ್ಯಕ್ಷ ಲಯನ್ ದಾಮೋದರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸಭೆಯಲ್ಲಿ ಹಾಜರಿದ್ದ ಹಲವು ಗಣ್ಯರು ಸಂಘದ ಏಳಿಗೆಗಾಗಿ ಹಲವು ಸಲಹೆ ಸೂಚನೆಗಳನ್ನು ಮತ್ತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಈ ಸಭೆಯಲ್ಲಿ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಖಜಾಂಜಿ ಗಿರೀಶ್ ಮಡಿಕೆಬೀಡು, ಪದಾಧಿಕಾರಿಗಳಾದ ಸುರೇಶ್ ಮಡಿಕೇರಿ, ಅಶ್ವಥ್ ಮಡಿಕೆಬೀಡು, ವಿಠಲ್ ಮಡಿಕೆ ಬೀಡು, ಅಪ್ಪಾಜಿ ಕುಶಾಲ್ ನಗರ್, ಮಂಜು ಬೈಚನಹಳ್ಳಿ, ಮನು ದೇವಪ್ಪ ಬೇತ್ರಿ, ಕೆ.ವೈ. ಲಕ್ಷ್ಮಣ ಮಡಿಕೆ ಬೀಡು, ಲೋಕೇಶ್ ಕುಶಾಲನಗರ, ಪವನ್ ಕುಲಾಲ್ ಮಡಿಕೇರಿ, ಚಂದ್ರಶೇಖರ್ ಕುಲಾಲ್ ಮುರ್ನಾಡು ಉಪಸ್ಥಿತರಿದ್ದರು. ಲೋಕೇಶ್ ಕುಶಾಲನಗರ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ್ ಕುಲಾಲ್ ಮೂರ್ನಾಡು ವಂದಿಸಿದರು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಸಂಘದ ಮೊಬೈಲ್ ಸಂಖ್ಯೆ 8050437179 ಸಂಪರ್ಕಿಸಬಹುದು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ