ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿಗೆ ಮುರಳಿ ಹೊಸಮಜಲು ಆಯ್ಕೆ

Upayuktha
0


ಮಂಗಳೂರು: ಭಾರತೀಯ ಜನತಾ ಪಾರ್ಟಿಯ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿಯ ನೂತನ ಸದಸ್ಯರನ್ನಾಗಿ ಮಂಗಳೂರಿನ ಇಂಡಿಯನ್ ಸಮೂಹ ಸಂಸ್ಥೆಗಳ ನಿರ್ದೇಶಕ ಮುರಳಿ ಹೊಸಮಜಲು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ. ಸಿ.ಬಿ. ಶಶಿಧರ ಅವರು ತಿಳಿಸಿದ್ದಾರೆ.


ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ನೇಮಕಾತಿಯ ಆದೇಶದ ಪ್ರತಿಯನ್ನು ನೀಡಿದರು.


ಮುರಳಿ ಅವರು 30 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮನ್ನು ತಾವು ಸಕ್ರೀಯವಾಗಿ ಹಾಗೂ ಸೃಜನಶೀಲರಾಗಿ ತೊಡಗಿಸಿಕೊಂಡಿದ್ದಾರೆ. ಅದಲ್ಲದೆ ಅವರು ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ, ಮಂಗಳೂರು ವಿಭಾಗದ ಅಧ್ಯಕ್ಷರಾಗಿಯು, ರೋಟರಿ ಕ್ಲಬ್ ದಕ್ಷಿಣ ವಿಭಾಗ ಇದರ ಸದಸ್ಯರಾಗಿಯು, ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿಯು ಮತ್ತು ಹಲವಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.


ಬಿಜೆಪಿ ಪ್ರಕೋಷ್ಠದ ರಾಜ್ಯ ಸಮಿತಿಯ ಸಂಯೋಜಕ ಎಸ್. ದತ್ತಾತ್ರಿ, ಸಹ ಸಂಯೋಜಕ ಫಣೀಶ್, ವಿಧಾನ ಪರಿಷತ್ ಸದಸ್ಯ ರವಿ ಕುಮಾರ, ಶಿಕ್ಷಣ ಪ್ರಕೋಷ್ಠದ ಸಂಚಾಲಕ ಡಾ. ಸಿ.ಬಿ. ಶಶಿಧರ, ಸಹ ಸಂಚಾಲಕ ಎಮ್. ಜಿ. ಭಟ್ ಕುಮ್ಟ ಅವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top