ಮಂಗಳೂರು: ಮಂಗಳೂರಿನ ಸಿಟಿ ಬಸ್ಸೊಂದರ ಸಿಬ್ಬಂದಿಗಳ ಸಮಯಪ್ರಜ್ಞೆ ಹಾಗೂ ಸಕಾಲಿಕ ಕ್ರಮದಿಂದ ವಿದ್ಯಾರ್ಥಿನಿಯೊಬ್ಬಳ ಪ್ರಾಣ ಉಳಿದಿದೆ.
ಘಟನೆಯ ವಿವರ:
13F ರೂಟ್ ನಂಬರ್ ಕೃಷ್ಣಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ ಚಲಿಸುತ್ತಿತ್ತು. ಅದರಲ್ಲಿದ್ದ ಪ್ರಯಾಣಿಕರ ಪೈಕಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಇದ್ದಕ್ಕಿದ್ದಂತೆ ಎದೆ ನೋವೆಂದು ಹಾರ್ಟ್ ಅಟ್ಯಾಕ್ನ ಸೂಚನೆ ನೀಡುತ್ತಿದ್ದಂತೆ, ತಕ್ಣ ಜಾಗೃತರಾದ ಬಸ್ಸಿನ ಚಾಲಕ- ನಿರ್ವಾಹಕರಾದ ಗಜೇಂದ್ರ ಕುಂದರ್ ಹಾಗೂ ಮಹೇಶ್ ಪೂಜಾರಿ ಸುರೇಶ್ ಏನನ್ನೂ ಯೋಚಿಸದೆ ಎಲ್ಲಾ ಪ್ರಯಾಣಿಕರನ್ನು ಹೊತ್ತುಕೊಂಡು ಆಂಬುಲೆನ್ಸ್ ಮಾದರಿಯಲ್ಲಿ ಸೈರನ್ ಹಾಕಿಕೊಂಡು 6 ಕಿ.ಮೀ ದೂರವನ್ನು 6 ನಿಮಿಷಗಳಲ್ಲಿ ಕ್ರಮಿಸಿ ನಗರದ ಕಂಕನಾಡಿ ಆಸ್ಪತ್ರೆಗೆ ಧಾವಿಸಿ ಬಂದರು. ಬಸ್ಸನ್ನು ಸೀದಾ ಆಸ್ಪತ್ರೆಯ ಗೇಟಿನ ಒಳಗಿನ ಅಂಗಣಕ್ಕೆ ತಂದು ನಿಲ್ಲಿಸಿ, ಅಸ್ವಸ್ಥ ವಿದ್ಯಾರ್ಥಿನಿಗೆ ತಕ್ಷಣ ಚಿಕಿತ್ಸೆ ದೊರೆಯುವಂತೆ ಮಾಡಿದರು. ವಿದ್ಯಾರ್ಥಿನಿಯನ್ನು casualty ಗೆ ಕ್ಲಪ್ತ ಸಮಯದಲ್ಲಿ ಸೇರಿಸಿ ಜೀವ ಉಳಿಸಿದ್ದಾರೆ. ಚಾಲಕ-ನಿರ್ವಾಹಕರ ಈ ಕೆಲಸವು ಸಾರ್ವಜನಿಕರನ್ನು ಮೂಕ ವಿಸ್ಮಿತರನ್ನಾಗಿಸಿದ್ದು, ಬಸ್ ಸಿಬ್ಬಂದಿಗಳ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಈ ಘಟನೆಯ ವೀಡಿಯೋ ಕ್ಲಿಪಿಂಗ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕರಾವಳಿಯಲ್ಲಿ ಬಸ್ಸು ಚಾಲಕ ನಿರ್ವಾಹಕ ಶ್ರಮಿಕ ವರ್ಗ ಮಾನವೀಯತೆಯ ಆಗರ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.
-ನಟರಾಜ್ ಪಚ್ಚನಾಡಿ
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ