ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದರ ಮನವಿಗೆ ತಕ್ಷಣ ಸ್ಪಂದಿಸಿ ಆದೇಶ ಹೊರಡಿಸಿದ ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್ಎಂ.
ಮಂಗಳೂರು: ವ್ಯಾಪಕ ಮಳೆಯಿಂದಾಗಿ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ಇಂದಿನಿಂದಲೇ ಪ್ರಾರಂಭಿಸಿ ನೈಋತ್ಯ ರೈಲ್ವೇ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಸಂಸದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈರುತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದು, ತುರ್ತಾಗಿ ಹೆಚ್ಚುವರಿ ರೈಲು ಸಂಚಾರವನ್ನು ಪ್ರಾರಂಭಿಸುವಂತೆ ವಿನಂತಿಸಿದ್ದರು.
ಸಂಸದರ ಪತ್ರಕ್ಕೆ ತುರ್ತಾಗಿ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ರೈಲ್ವೆ ಇಲಾಖೆಯು ನಾಲ್ಕು ದಿನಗಳ ಕಾಲ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಹಾಗೂ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಿಂದ ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ವಿಶೇಷ ರೈಲನ್ನು ನೀಡಿ ಆದೇಶ ನೀಡಿದೆ. ರಸ್ತೆ ಸಂಪರ್ಕ ಕಡಿತದಿಂದ ಉಂಟಾದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಈ ವಿಶೇಷ ರೈಲನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ಜನರ ಅವಶ್ಯಕತೆಗಳನ್ನು ಪರಿಗಣಿಸಿ ಮುಂದುವರಿಸಲಾಗುವುದು ಎಂದು ತಿಳಿಸಿದೆ.
ಈ ವಿಶೇಷ ರೈಲುಗಳ ಓಡಾಟ ಹೆಚ್ಚುವರಿ ಪ್ರಯಾಣಿಕರ ಸಂಚಾರದ ಒತ್ತಡವನ್ನು ಕಡಿಮೆ ಮಾಡಲಿದ್ದು, ಪ್ರಯಾಣಿಕರು ಅನುಕೂಲಕರವಾಗಿ ಪ್ರಯಾಣಿಸಬಹುದಾಗಿದೆ.
ವಿಶೇಷ ರೈಲುಗಳ ವಿವರ:
– ಜು. 19ರಂದು ರೈಲು ಸಂಖ್ಯೆ 06547 ಎಸ್ಬಿಸಿ ಬೆಂಗಳೂರಿನಿಂದ ಹೊರಡಲಿದೆ.
– ಜು. 20ರಂದು ರೈಲು ಸಂಖ್ಯೆ 06548 ಮಂಗಳೂರು ಜಂಕ್ಷನ್ನಿಂದ ಯಶವಂತಪುರಕ್ಕೆ ತೆರಳಲಿದೆ.
– ಜು. 21 ಹಾಗೂ 22ರಂದು ರೈಲು ಸಂಖ್ಯೆ 06549 ಯಶವಂತಪುರದಿಂದ ಮಂಗಳೂರು ಜಂಕ್ಷನ್ಗೆ ಬರಲಿದೆ.
– ಜು. 21 ಹಾಗೂ 22 ರಂದು ರೈಲು ಸಂಖ್ಯೆ 06550 ಮಂಗಳೂರು ಜಂಕ್ಷನ್ನಿಂದ ಯಶವಂತಪುರಕ್ಕೆ ತೆರಳಲಿದೆ.
ಹೆಚ್ಚಿನ ಸಂಖ್ಯೆಯ ಜನರು ಮಂಗಳೂರು- ಬೆಂಗಳೂರು ನಗರಗಳ ನಡುವೆ ನಿತ್ಯ ಪ್ರಯಾಣಿಸುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಇತರ ಸಾರಿಗೆ ವ್ಯವಸ್ಥೆಯಿಲ್ಲದ ಕಾರಣದಿಂದ ಹೆಚ್ಚುವರಿ ರೈಲು ಸೇವೆಯನ್ನು ಒದಗಿಸುವ ಅಗತ್ಯವಿದ್ದು, ಶೀಘ್ರದಲ್ಲಿ ಹೆಚ್ಚುವರಿ ರೈಲ್ವೆ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ವಿನಂತಿಸಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ