ಉಡುಪಿ: ಶ್ರೀ ಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರ ಶುಭ ಆಶೀರ್ವಾದದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ವಿಟ್ಲಪಿಂಡಿ ಆಚರಣೆಯ ಶುಭ ದಿನವಾದ ಇಂದು (ಜು.23) ಮಂಗಳವಾರ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ "ಉಡುಪಿ ಜಿಲ್ಲಾ ಪ್ರಥಮ ಕನ್ನಡ ಜಾನಪದ ಸಮ್ಮೇಳನದ" ಪೂರ್ವಭಾವಿ ಸಭೆಯು ಪರ್ಯಾಯ ಶ್ರೀ ಪುತ್ತಿಗೆ ಮಠದ ದಿವಾಣರಾದ ಶ್ರೀ ನಾಗರಾಜ ಆಚಾರ್ಯ ಹಾಗೂ ಶ್ರೀ ಮಠದ ವಿದೇಶ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನ ಆಚಾರ್ಯ, ಹಾಗೂ ಪರ್ಯಾಯ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ರಮೇಶ್ ಭಟ್ ಕೆ, ಇವರ ಉಪಸ್ಥಿತಿಯೊಂದಿಗೆ ನಡೆಯಿತು.
ಮುಂದಿನ ತಿಂಗಳು 27 ರಂದು ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ, ಉಡುಪಿ ತಾಲೂಕು ಘಟಕ ಈ ಸಮ್ಮೇಳನವನ್ನು ಏರ್ಪಡಿಸುತ್ತಿದೆ.
ಈ ಸಂದರ್ಭದಲ್ಲಿ ಸಮ್ಮೇಳನದ ಸಂಪೂರ್ಣ ಮಾಹಿತಿಯನ್ನು ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಇದರ ಜಿಲ್ಲಾಧ್ಯಕ್ಷರಾದ ಡಾ.ಗಣೇಶ್ ಗಂಗೊಳ್ಳಿ ಅವರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ಸುವರ್ಣ ಕಟಪಾಡಿ ಮಾಹಿತಿ ನೀಡಿದರು.
ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಕರ್ವಾಲ್ ಅವರು ಹಾಗೂ ಉಡುಪಿ ತಾಲುಕು ಅಧ್ಯಕ್ಷರಾದ ಶ್ರೀಮತಿ ಮಾಯಾ ಕಾಮತ್, ಉಡುಪಿ ತಾಲುಕು ಸಂಚಾಲಕರಾದ ಶ್ರೀಮತಿ ಪ್ರಭಾ ರಾವ್ ಇವರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ