ಉಡುಪಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ ದ್ವಿತೀಯ ಸಮಾಲೋಚನಾ ಸಭೆ

Upayuktha
0

ಸಂಭ್ರಮದ 'ನಮ್ಮೂರ ಕೃಷ್ಣನ ಹಬ್ಬ' ಆಚರಣೆಗೆ ಸಿದ್ಧತೆ

 


ಉಡುಪಿ: ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಈ ಬಾರಿಯ ಶ್ರೀಕೃಷ್ಣಾಷ್ಟಮಿ- ವಿಟ್ಲಪಿಂಡಿ ಮಹೋತ್ಸವವನ್ನು 'ನಮ್ಮೂರ ಕೃಷ್ಣನ ಹಬ್ಬ'ವಾಗಿ ಎಲ್ಲ ಸಮುದಾಯದ ಕೃಷ್ಣಭಕ್ತರನ್ನೊಳಗೊಂಡು ವಿಭಿನ್ನವಾಗಿ ಆಚರಿಸಲು ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಸಂಕಲ್ಪಿಸಿದ್ದಾರೆ.


ಆಗಸ್ಟ್ 26ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ 27ರಂದು ವಿಟ್ಲಪಿಂಡಿ ಉತ್ಸವ ನಡೆಯಲಿದ್ದು, ಮಹೋತ್ಸವದ ಪೂರ್ವಸಿದ್ಧತೆಗಾಗಿ ಈಗಾಗಲೇ ಎರಡು ಸಭೆಗಳನ್ನು ನಡೆಸಲಾಗಿದೆ. 


ಸೋಮವಾರ ಪರ್ಯಾಯ ಪುತ್ತಿಗೆ ಮಠ ದಿವಾನ ನಾಗರಾಜ ಆಚಾರ್ಯ ನೇತೃತ್ವದಲ್ಲಿ ದ್ವಿತೀಯ ಸಭೆ ನಡೆಯಿತು. ಆಗಸ್ಟ್ 1ರಿಂದಲೇ ಕೃಷ್ಣಮಠದಲ್ಲಿ ನಮ್ಮೂರ ಕೃಷ್ಣನ ಹಬ್ಬ ಆರಂಭಗೊಳ್ಳಲಿದ್ದು, ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳು, ಉಪನ್ಯಾಸ- ಪ್ರವಚನಗಳು, ಸಾಂಸ್ಕೃತಿಕ ಕಾರ್ಯಕ್ರಮ ಇತ್ಯಾದಿ ಆಯೋಜಿಸಲಾಗುತ್ತಿದ್ದು, ಮಹೋತ್ಸವವನ್ನು ನಾಡಹಬ್ಬದ ರೀತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಶ್ರೀಮಠದ ಕಾರ್ಯದರ್ಶಿ ಪ್ರಸನ್ನಾಚಾರ್ಯ ಮಾಹಿತಿ ನೀಡಿದರು.


ರಮೇಶ ಭಟ್ ಸ್ವಾಗತಿಸಿ, ವಂದಿಸಿದರು. ಪರ್ಯಾಯ ಸ್ವಾಗತ ಸಮಿತಿ ಪದಾಧಿಕಾರಿಗಳು, ವಿವಿಧ ಸಂಘಸಂಸ್ಥೆಗಳ ಪ್ರಮುಖರು ಇದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top