ಬಳ್ಳಾರಿ ಜಿಲ್ಲಾ ಸರ್ಜನ್ ಡಾ.ಬಸರೆಡ್ಡಿ ಅವರಿಗೆ “ವೈದ್ಯರತ್ನ” ಪ್ರಶಸ್ತಿ

Upayuktha
0

 




ಬಳ್ಳಾರಿ: ಇತ್ತೀಚೆಗೆ ತುಮಕೂರಿನಲ್ಲಿ ನಡೆದ ಕಲ್ಪತರು ವೈದ್ಯೋತ್ಸವದಲ್ಲಿ ಉತ್ತಮ ಸೇವೆಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬಳ್ಳಾರಿ ಜಿಲ್ಲಾ ಸರ್ಜನ್ ಡಾ.ಬಸರೆಡ್ಡಿ ಅವರಿಗೆ “ವೈದ್ಯರತ್ನ “ಪ್ರಶಸ್ತಿ ನೀಡಿ ಗೌರವಿಸಿದೆ.


ಈ ಹಿನ್ನಲೆಯಲ್ಲಿ ಬಳ್ಳಾರಿಯ ಮಹಾನಗರ ಪಾಲಿಕೆಯ ಪ್ರತಿ ಪಕ್ಷದ ನಾಯಕ ಸಿ.ಇಬ್ರಾಹಿಂ ಬಾಬು ಮತ್ತು ಬಿಜೆಪಿಯ ಸದಸ್ಯರಾದ ಶ್ರೀನಿವಾಸ್ ಮೋತ್ಕರ್, ಡಾ.ಕೆ.ಎಸ್.ಅಶೋಕ್ ಕುಮಾರ್, ಗುಡಿಗಂಟಿ ಹನುಮಂತಪ್ಪ, ಹನುಮಂತಪ್ಪ , ಮುಖಂಡರಾದ ಎಸ್.ಮಲ್ಲನಗೌಡ,ಸುರೇಂದ್ರ ಮೊದಲಾದವರು ಬಸರೆಡ್ಡಿ ಅವರನ್ನು ಗೌರವಿಸಿ ಸನ್ಮಾನಿಸಿದ್ದಾರೆ.


ಈ ವೇಳೆ ಮಾತನಾಡಿದ ಇಬ್ರಾಹಿಂ ಬಾಬು ಅವರು ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯ ಸಮೂಹ ಹಾಗು ಸಿಬ್ಬಂದಿ ಜೊತೆ ಉತ್ತಮ ಚಿಕಿತ್ಸೆ ನೀಡುತ್ತಿರುವ ಇವರ ಸೇವೆ ಜನತೆಗೆ ಮತ್ತಷ್ಟು ವರ್ಷ ದೊರೆಯಲಿ. ಇಂತಹ ಪ್ರಶಸ್ತಿಗಳು ಮತ್ತಷ್ಟು ದೊರೆಯಲಿಎಂದು ಆಶಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top