ಉಜಿರೆ : ರೋಟರಿ ಕ್ಲಬ್ ನಿಂದ ಸೈಬರ್ ಅಪರಾಧ ಕಾನೂನು ಮಾಹಿತಿ ಕಾರ್ಯಕ್ರಮ

Upayuktha
0

ಸೈಬರ್ ಅಪರಾಧ ತಡೆಯಲು ಸಹಕರಿಸಿ: ಡಿವೈಎಸ್ಪಿ, ಮಂಜುನಾಥ್ ಆರ್.ಜಿ


ಉಜಿರೆ :
ಬೆಳ್ತಂಗಡಿ ರೋಟರಿ ಕ್ಲಬ್ ಮತ್ತು  ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ  ಉಜಿರೆಯ ಶ್ರೀ.ಧ.ಮಂಜುನಾಥೇಶ್ವರ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಎಂಜಿನಿಯರಿಂಗ್  ವಿದ್ಯಾರ್ಥಿಗಳಿಗೆ 'ಸೈಬರ್ ಅಪರಾಧ ಕಾನೂನು ಮತ್ತು ರಕ್ಷಣೆ' ವಿಷಯದ ಬಗ್ಗೆ ಚರ್ಚೆ ಮತ್ತು ಜಾಗೃತಿ ಕಾರ್ಯಕ್ರಮ ಆಯೋಜಿಸಿತ್ತು.


ಪೊಲೀಸ್ ಇಲಾಖೆ ಮಂಗಳೂರು ದಕ್ಷಿಣ  ವಿಭಾಗದ ಉಪ ಪೋಲಿಸ್  ವರಿಷ್ಠಾಧಿಕಾರಿ ಮಂಜುನಾಥ್ ಆರ್.ಜಿ ಮಾತನಾಡಿ, ಸೈಬರ್ ಸಂಬಂಧಿತ ಪ್ರಕರಣ ಗಳಲ್ಲಿ ಪೊಲೀಸ್ ಇಲಾಖೆ ತೆಗೆದುಕೊಂಡ ಕಾನೂನು ಕ್ರಮಗಳ ಕುರಿತು ತಮ್ಮ ಅನುಭವ ಹಂಚಿಕೊಂಡರು. ಹಣಕಾಸು ವಂಚನೆ , ಮಾದಕ ವಸ್ತುವಿನ ದುರ್ಬಳಕೆ ಇತ್ಯಾದಿ ಸೈಬರ್ ಅಪರಾಧಗಳಿಗೆ ವಿದ್ಯಾರ್ಥಿಗಳು ಬಲಿಯಾಗದೆ ಅಪರಾಧಗಳನ್ನು ತಡೆಯುವಲ್ಲಿ ಸಹಕರಿಸಬೇಕು.


ಜೊತೆಗೆ ಶಿಕ್ಷಕರು  ಪೋಷಕರು ಮಹತ್ತರ ಜವಾಬ್ದಾರಿ ವಹಿಸಬೇಕು. ಮಾದಕ ವಸ್ತುಗಳ ವ್ಯಸನದಿಂದ ವಿದ್ಯಾರ್ಥಿಗಳ ಮೇಲೆ ದೈಹಿಕ ಮತ್ತು ಮಾನಸಿಕವಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ಅವರು ಜಾಗೃತಿ ಮೂಡಿಸಬೇಕು ಎಂದರು.


ಮಂಗಳೂರು ವಿಭಾಗದ ಬಂಡೂರು ಸೈಬರ್, ಹಣಕಾಸು ಮತ್ತು ಮಾದಕ ದ್ರವ್ಯ ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ್ ಮಾದಕ ವ್ಯಸನ ಮತ್ತು ಸೈಬರ್ ಅಪರಾಧಗಳ ದುಷ್ಪರಿಣಾಮಗಳ ಬಗ್ಗೆ ಮಾತನಾಡಿದರು.


ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮಾ, ಮಾತನಾಡಿ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧ ಕಾನೂನುಗಳ ಅರಿವಿನ ಅಗತ್ಯತೆ ಮತ್ತು ಅಳವಡಿಸಿಕೊಳುವುಕೆಯ ಕುರಿತಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಅಶೋಕ್ ಕುಮಾರ್ ವಹಿಸಿಕೊಂಡು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಪೋಲಿಸ್ ಇಲಾಖೆಯ ಅಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.


ಈ ಸಂದರ್ಭದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ  ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ಹಾಗು ಕಾಲೇಜಿನ ಉಪನ್ಯಾಸಕರು ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಭಾಗಿಯಾಗಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top