ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ನಲ್ಲಿಯೇ ಭದ್ರತೆ ಇಲ್ಲವಾದ್ರೇ ಹೇಗೆ..? ಇದು ಇಡೀ ದೇಶವೇ ತಲೆ ತಗ್ಗಿಸುವ ವಿಚಾರವಾಗಿದೆ. ಇದೇ ವಿಷಯ ಮುಂದಿಟ್ಟುಕೊಂಡು ಕೆಲವರು ರಾಜಕೀಯ ಮಾಡುತ್ತಿ ದ್ದಾರೆ. ನಮಗೆ ರಾಜಕೀಯ ಬೇಡ ನ್ಯಾಯ ಬೇಕು ಎಂದು ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಎನ್.ಸಿ. ಮಂಜುನಾಥ ಹೇಳಿದರು. ಘಟನೆಯನ್ನು ಖಂಡಿಸಿ ಪ್ರತಿಭಟನೆ ಮಾಡಿದವರ ಮೇಲೆ ಹಲ್ಲೆ ಮಾಡಿದ್ದು ದುರದೃಷ್ಟಕರವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಶಿಷ್ಯ ವೇತನ ಇತರೆ ರಾಜ್ಯಕ್ಕೆ ಹೊಲಿಕೆ ಮಾಡಿದರೆ ರಾಜ್ಯದಲ್ಲಿ ಅತಿ ಕಡಿಮೆ ಇದೆ. ರಾಜ್ಯದಲ್ಲಿ 45 ರಿಂದ 55 ಸಾವಿರ ಶಿಷ್ಯ ವೇತನ ನೀಡಲಾಗ್ತಿದೆ. ಆದರೆ ಮಹಾರಾಷ್ಟ್ರ ಗುಜರಾಜ್ ಸೇರಿದಂತೆ ಬೇರೆ ರಾಜ್ಯದಲ್ಲಿ ಹ 85 ರಿಂದ 1.15 ಲಕ್ಷದವರೆಗೂ ಇದೆ. ಹೀಗಾಗಿ ಈ ತಾರತಮ್ಯವೇಕೆ ಎಂದು ಪ್ರಶ್ನಿಸಿದರು. ಇನ್ನೂ ಶುಲ್ಕದ ವಿಚಾರದಲ್ಲಿಯೂ ಕರ್ನಾಟಕದಲ್ಲಿ ಅತಿ ಹೆಚ್ಚಳವಾಗಿದೆ. ಪ್ರತಿಭಟನೆ ಕುರಿತು ಕಳೆದ ಅರು ತಿಂಗಳ ಹಿಂದೆಯೇ ಸರ್ಕಾರದ ಗಮನಕ್ಕೆ ತರಲಾಗಿದೆ.
ಕಳೆದ ಒಂದು ತಿಂಗಳ ಹಿಂದೆಯೇ ಪ್ರತಿಭಟನೆ ಬಗ್ಗೆ ವಿವರಣೆ ನೀಡಿದ್ದೇವೆ. ಐದನೇ ತಾರಿಕಿನಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡ್ತಿದ್ದೇವೆ ಇಷ್ಟೇಲ್ಲ ಆದರೂ ಸರ್ಕಾರ ನಮ್ಮ ಸಮಸ್ಯೆ ಬಗ್ಗೆ ಗಮನ ಹರಿಸಿಲ್ಲ ಎಂದು ತಮ್ಮ ಆಕ್ರೋಶವ್ಯಕ್ತಪಡಿಸಿದರು. ಈ ವೇಳೆ ಡಾ. ನೂರಿ, ತಬಸ್ಸಮ್, ಕಾರ್ತಿಕ್, ಸೇರಿದಂತೆ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ