ಬೆಂಗಳೂರು: ಪ್ರಣವಾಂಜಲಿ ನೃತ್ಯ ಅಕಾಡೆಮಿ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ಸಂಸ್ಥೆಯು ತನ್ನ 12ನೇ ವರ್ಷದ ವಾರ್ಷಿಕೋತ್ಸವವನ್ನು ನಗರದ ಜೆ ಸಿ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಆಗಸ್ಟ್ 31, ಶನಿವಾರ ಸಂಜೆ 5-00 ಗಂಟೆಗೆ ಆಯೋಜಿಸಿದೆ.
ಈ ನೃತ್ಯ ಕಾರ್ಯಕ್ರಮದಲ್ಲಿ ಸಂಸ್ಥೆಯ 60ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಲಿದ್ದು, "ರಾಮಕಥಾ" ಎನ್ನುವ ಅದ್ಭುತವಾದ ನೃತ್ಯ ನಾಟಕವನ್ನು ಪ್ರಸ್ತುತ ಪಡಿಸುತ್ತಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೆ.ಎನ್. ಕೇಶವ ನಾರಾಯಣ (ಮಾಜಿ ನ್ಯಾಯಾಧೀಶರು, ಹೈ ಕೋರ್ಟ್ ಆಫ್ ಕರ್ನಾಟಕ), ಮತ್ತು ಶ್ರೀಮತಿ ದೀಪಾ ಕೆ.ಎನ್. (ನಟಿ, ಸಂಯೋಜಕರು) ಆಗಮಿಸಲಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕಿಯರಾದ ಶ್ರೀಮತಿ ಪವಿತ್ರ ಪ್ರಶಾಂತ್ ಹಾಗೂ ಶ್ರೀಮತಿ ಗಾಯತ್ರಿ ಮಯ್ಯ ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ