ಆ.10ರಂದು ಸುಳ್ಯದಲ್ಲಿ ಬರಹಗಾರರು, ಕಲಾವಿದರೊಂದಿಗೆ ಸಂವಾದ

Upayuktha
0

ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆಯಲ್ಲಿ ಉತ್ತಮ ಸಾಹಿತ್ಯ, ಸಂಗೀತ, ನಾಟಕ, ಜನಪದ ಕಲಾ ಪ್ರಕಾರಗಳಿಗಾಗಿ ಒಂದೇ ವೇದಿಕೆಯಲ್ಲಿ ಎಲ್ಲವರನ್ನು ಸೇರಿಸಿ ಸಾಹಿತ್ಯ, ಸಂಸ್ಕೃತಿಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಆಗಸ್ಟ್ 10 - 2024  ಶನಿವಾರ ಬೆಳಗ್ಗೆ 10 ಗಂಟೆಗೆ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ಸಾಹಿತಿಗಳು, ಬರಹಗಾರರು ಮತ್ತು ಕಲಾವಿದ ರೊಂದಿಗೆ 'ಸಂವಾದ ಕಾರ್ಯಕ್ರಮ' ಜರುಗಲಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ.


ಹೆಚ್ಚಿನ ಮಾಹಿತಿಗೆ ಅಧ್ಯಕ್ಷರು/ ರಿಜಿಸ್ಟ್ರಾರ್ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ ಕಟ್ಟಡ, ಮಡಿಕೇರಿ, ಕೊಡಗು ಜಿಲ್ಲೆ, ಮೊ. ನಂ 6362588677 ಇಲ್ಲಿಂದ ಪಡೆಯಬಹುದಾಗಿದೆ ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top