ಕಾರ್ಕಳ: ರೋಟರಿ ಕ್ಲಬ್ ನಿಟ್ಟೆ ವತಿಯಿಂದ 15 ಕಬ್ಬಿಣದ ಮಂಚಗಳನ್ನು ಕಾಂತಾವರದ ಅಲ್ಲಮ ಪ್ರಭು ಪೀಠಕ್ಕೆ ಕೊಡುಗೆಯಾಗಿ ಇತ್ತೀಚೆಗೆ ನೀಡಲಾಯಿತು. ರೋಟರಿ ಕ್ಲಬ್ ನಿಟ್ಟೆಯ ಅಧ್ಯಕ್ಷ ರೊ. ಸತೀಶ್ ಕುಮಾರ್ ಅಲ್ಲಮ ಪ್ರಭು ಪೀಠದ ಪ್ರಧಾನ ನಿರ್ದೇಶಕರಾದ ವಿಜಯ ಕುಮಾರ್ ತೆಕ್ಕಟ್ಟೆಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಅಲ್ಲಮ ಪ್ರಭು ಪೀಠದ ಸ್ಥಾಪಕಾಧ್ಯಕ್ಷ ಡಾ. ನಾ. ಮೊಗಸಾಲೆಯವರು, ಕಾರ್ಯಾಧ್ಯಕ್ಷ ಯಶೋಧರ ಕರ್ಕೇರ, ಕೆನರಾ ಬ್ಯಾಂಕಿನ ನಿವೃತ್ತ ಡಿಜಿಎಂ ದಿವಾಕರ್ ಶೆಟ್ಟಿ, ನಿಟ್ಟೆ ರೋಟರಿ ಕ್ಲಬ್ ನ ಸದಸ್ಯರಾದ ರೊ. ರಾಜಶೇಖರ್ ಮೇಟಿ, ರೊ. ಡಾ. ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ