ಮಂಗಳೂರು: ಅತ್ತಣ ಕೋಗಿಲೆ ಇತ್ತಣ ಮಾಮರ ಅತ್ತಣ ಪರ್ಷ್ಯಾದ ಗಜಲ್ ಇತ್ತಣ ಕರ್ನಾಟಕದ ಮಾಮರ ಎಂಬ ಹಾಗೆ ಗಜಲ್ ನಡೆದು ಬಂದ ದಾರಿಯಾಯಿತು ಹೊಸತನ್ನು ಹೊಸೆವ ಆಸಕ್ತಿ ಗಜಲ್ ಬೆಳವಣಿಗೆಗೆ ಕಾರಣ ಎಂದು ಮಂಗಳೂರಿನ ಕಣಚೂರು ಹಾಗೂ ಮಂಗಳಾ ಆಸ್ಪತ್ರೆಯ ವೈದ್ಯ ಹಾಗೂ ಬರಹಗಾರ ಡಾ ಸುರೇಶ ನೆಗಳಗುಳಿ ಹೇಳಿದರು.
ಅವರು ಕಲಬುರ್ಗಿಯಲ್ಲಿ ವಿಶ್ವ ವಿದ್ಯಾಲಯ, ಗಜಲ್ ಎಕಾಡೆಮಿಗಳ ಸಹಯೋಗದಲ್ಲಿ ಆ.25ರಂದು ನಡೆದ ಪ್ರಥಮ ಅಂತರಾಷ್ಟ್ರೀಯ ಗಜಲ್ ಸಮ್ಮೇಳನದಲ್ಲಿ ಮಾತನಾಡಿದರು.
ಗಜಲ್ ನಡೆದು ಬಂದ ಹಾದಿ ಎಂಬ ಗೋಷ್ಠಿಯ ಚಾಲನೆ ಮಾಡಿದ ಅವರು ಭಾರತದ ಹೆಸರಾಂತ ಗಜಲ್ಕಾರರ ಬಗೆಗೆ ಹೇಳುತ್ತಾ ಕರ್ನಾಟಕ ಇಂದು ಅತಿ ಹೆಚ್ವು ಗಜಲ್ ಬರಹಗಾರರನ್ನು ಹೊಂದಿದೆ ಎಂದರು. ಭಾವನೆಗೆ ನಿಯಮಾವಳಿಗಳ ಮೂಲಕ ಕೊಡುವ ಚೌಕಟ್ಟು ಗಜಲ್ ಗೆ ಮೂಲ ಸ್ತಂಭ ಎಂದವರು ಹೇಳಿದರು.
ಖ್ಯಾತ ಕವಿ ಅಲ್ಲಾಗಿರಿ ರಾಜರ ಅಧ್ಯಕ್ಷತೆಯಲ್ಲಿ ನಡೆದ ಈ ಗೋಷ್ಠಿಯಲ್ಲಿ ಶ್ರೀದೇವಿ ಕೆರೆಮನೆ, ಯಾಕೊಳ್ಳಿ ಹಾಗೂ ಅರುಣಾ ನರೇಂದ್ರ ರವರು ಪ್ರಬುದ್ಧ ಪ್ರಬಂಧ ಮಂಡಿಸಿದರು.
ಸಂಘಟಕ ಮಹೀಪಾಲ ರೆಡ್ಡಿ, ಹೈತೋ ಗಜಲ್ ಎಕಾಡೆಮಿ ಅಧ್ಯಕ್ಷ ರಂಗಸ್ವಾಮಿ, ರತ್ನ ರಾಯ ಮಲ್ಲ, ಸಿದ್ಧರಾಮ ಹೊನಕಲ್, ಹಾ.ಮ. ಸತೀಶ, ಮತ್ತು ಆಕಾಶವಾಣಿಯ ಸದಾನಂದ ಪೆರ್ಲ, ಡಾ ಹಸೀನಾ ಶಿವಮೊಗ್ಗ, ನೂರ್ ಮಹಮ್ಮದ್, ನಂರುಶಿ, ಕರನಂದಿ ಮತ್ತನೇಕ ಖ್ಯಾತನಾಮರು ಉಪಸ್ಥಿತರಿದ್ದರು. ಸರ್ವಾಧ್ಯಕ್ಷೆ ಪ್ರಭಾವತಿ ದೇಸಾಯಿಯವರು ಕಾರ್ಯಕ್ರಮದುದ್ದಕ್ಕೂ ಉಪಸ್ಥಿತರಿದ್ದರು.
ನೂರು ಕವಿಗಳ ರಚಿತ ಗಜಲ್ ಸಂಕಲನ ಬಿಡುಗಡೆ ಈ ಸಂದರ್ಭದ ವಿಶೇಷತೆಗಳಲ್ಲೊಂದು. ನಟ ನಿರೂಪಕ ಗಾಯಕ ಶ್ರೀನಿವಾಸ ಪ್ರಭು ಪ್ರಮುಖ ಆಕರ್ಷಣೆಯಾಗಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ