ಕಾಸರಗೋಡು: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ). ಕೇರಳ ರಾಜ್ಯ ಘಟಕ ಕಾಸರಗೋಡು ಇದರ ಆಶ್ರಯದಲ್ಲಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಕಾಸರಗೋಡು ಇದರ ಸಹಯೋಗದಲ್ಲಿ, ಕಾಸರಗೋಡು ಕನ್ನಡ ಗ್ರಾಮದಲ್ಲಿ 2024 ನವೆಂಬರ್ 10 ಭಾನುವಾರ ಒಂದು ದಿನದ 'ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ- 2024'ವನ್ನು ಏರ್ಪಡಿಸಲು ನಿರ್ಧರಿಸಲಾಗಿದೆ.
ಕಾಸರಗೋಡು ಜಿಲ್ಲೆ ಸಹಿತ ಕೇರಳ ರಾಜ್ಯದ ಎಲ್ಲಾ ಕನ್ನಡ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಪ್ರತಿನಿಧಿಗಳನ್ನು ಆಮಂತ್ರಿಸಿ 'ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ'ವನ್ನು ಸಂಘಟಿಸಲಾಗುವುದು. ಕಾಸರಗೋಡು ಜಿಲ್ಲೆ ಸಹಿತ ಕೇರಳ ರಾಜ್ಯದ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸಮ್ಮೇಳನದ ಅಧ್ಯಕ್ಷರಾಗಿರುತ್ತಾರೆ. ವಿವಿಧ ಗೋಷ್ಠಿಯ ಅಧ್ಯಕ್ಷತೆಯನ್ನು ಕನ್ನಡ ವಿದ್ಯಾರ್ಥಿಗಳೇ ವಹಿಸಲಿದ್ದಾರೆ. ಶಾಲಾ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಗಳ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಬಹುಮುಖ ಪ್ರತಿಭಾವಂತ ವಿದ್ಯಾರ್ಥಿಗಳು ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವಂತೆ ಆಮಂತ್ರಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳ ಪೋಷಕರು ಅಥವಾ ಶಾಲಾ-ಕಾಲೇಜಿನ ವಿವಿಧ ವಿಭಾಗದ ಮುಖ್ಯಸ್ಥರು ಅಧ್ಯಾಪಕರ ಶಿಫಾರಸ್ಸಿನೊಂದಿಗೆ ವಿದ್ಯಾರ್ಥಿಗಳ ಹೆಸರು, ಮನೆ ವಿಳಾಸ, ಶಾಲಾ- ಕಾಲೇಜಿನ ವಿಳಾಸ, ಜನ್ಮ ದಿನಾಂಕ, ವಯಸ್ಸು, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ, ಪಾಸ್ಪೋರ್ಟ್ ಗಾತ್ರದ ಒಂದು ಭಾವಚಿತ್ರ ಮತ್ತು ತಮ್ಮ ಆಸಕ್ತಿ ಕ್ಷೇತ್ರದ ಕಿರು ಸಾಧನಾ ಪರಿಚಯ ಪತ್ರದೊಂದಿಗೆ ಮಾಹಿತಿಗಳನ್ನು ಬರಹ ಮೂಲಕ ಬರೆದು ಕಳುಹಿಸಲು ಕೋರಲಾಗಿದೆ.
ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಶಾಲಾ ಮಕ್ಕಳ ಕವಿ ಗೋಷ್ಠಿ, ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿ, ಬಹುಭಾಷಾ ವಿದ್ಯಾರ್ಥಿಗಳ ಕವಿಗೋಷ್ಠಿ, ಶಾಲಾ ಕಾಲೇಜು ವಿದ್ಯಾರ್ಥಿಗಳ ಸಮೂಹ ಗೀತ ಗಾಯನ, ಕನ್ನಡ ಜಾನಪದ, ಚಲನಚಿತ್ರ ಸಮೂಹ ಗೀತ ಗಾಯನ, ಮಕ್ಕಳ ಸಾಹಿತ್ಯ ಗೋಷ್ಠಿ ವಿಭಾಗದಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಬರೆದು ತಿಳಿಸಬೇಕು. ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಕಾಸರಗೋಡು ಜಿಲ್ಲೆ ಸಹಿತ ಕೇರಳ ರಾಜ್ಯದ ವಿವಿಧ ಕನ್ನಡ ಪರ ಸಂಘ-ಸಂಸ್ಥೆಗಳ ಪ್ರತಿನಿಧಿಗಳನ್ನು ಆಮಂತ್ರಿಸಲಾಗುವುದು. ಅಂತರ ರಾಜ್ಯದ ಕವಿಗಳು, ಸಾಹಿತಿಗಳು, ಲೇಖಕರು, ಕಲಾವಿದರು, ಮಾಧ್ಯಮದವರು, ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಸಾಹಿತ್ಯ ಸಾಂಸ್ಕೃತಿಕ ಸಂಘಟಕರನ್ನು ಆಹ್ವಾನಿಸಲಾಗುವುದು.
ಹೊರ ರಾಜ್ಯ ಮತ್ತು ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಇದರ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಸಂಪರ್ಕ: ಶಿವರಾಮ ಕಾಸರಗೋಡು, ಅಧ್ಯಕ್ಷರು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಕೇರಳ ರಾಜ್ಯ ಘಟಕ, ಕನ್ನಡ ಗ್ರಾಮ, ಪಾರಕಟ್ಟ ರಸ್ತೆ, ಕಾಸರಗೋಡು-671121
ಮೊಬೈಲ್: 9448572016(ಸಂಜೆ 6 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ಸಂಪರ್ಕಿಸಬಹುದು). ಪತ್ರ ವ್ಯವಹಾರಗಳನ್ನು ಅಂಚೆಯ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬೇಕಾಗಿ ವಿನಂತಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ