ಕಲಿಕೆ ನಿರಂತರತೆಯಿಂದ ಕೂಡಿರುತ್ತದೆ: ರಾಮಕೃಷ್ಣ ಭಟ್ ಚೊಕ್ಕಾಡಿ

Upayuktha
0

 ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ 'ವಿಕಸನ 2024-25' ಕಾರ್ಯಾಗಾರ ಸರಣಿಯ ಎರಡನೇ ಕಾರ್ಯಕ್ರಮ


ಅಡ್ಯನಡ್ಕ: ಕಲಿಕೆ ನಿರಂತರತೆಯಿಂದ ಕೂಡಿರುತ್ತದೆ. ವಿದ್ಯಾರ್ಥಿಗಳ ಕಲಿಕೆಗೆ ಪುನರ್ಬಲನ ನೀಡುವಲ್ಲಿ ನಿಯಂತ್ರಿತ ಸಕಾರಾತ್ಮಕ ಪ್ರತಿಕ್ರಿಯೆಗಳು ಮುಖ್ಯವಾಗುತ್ತವೆ ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ, ಬೆಳಾಲು ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ, ಲೇಖಕ ರಾಮಕೃಷ್ಣ ಭಟ್ ಚೊಕ್ಕಾಡಿ ಅವರು ಹೇಳಿದರು.


ಆಗಸ್ಟ್ 10ರಂದು ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ನಡೆದ ವಿಕಸನ 2024-25 ಕಾರ್ಯಾಗಾರ ಸರಣಿಯ ಎರಡನೇ ಕಾರ್ಯಕ್ರಮದಲ್ಲಿ 'ಶಿಕ್ಷಣದಲ್ಲಿ ಸಂವಹನ' ವಿಷಯದಲ್ಲಿ ಅವರು ಉಪನ್ಯಾಸ ನೀಡಿದರು.


ಪ್ರತಿಯೊಂದು ಮಗುವೂ ತನ್ನ ಮನೆಯ ಪರಿಸರದಿಂದಾಗಿ ವಿಭಿನ್ನವಾಗಿರುತ್ತದೆ. ಹಾಗಾಗಿ ಶಿಕ್ಷಕರು ವಿದ್ಯಾರ್ಥಿಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ಶಿಕ್ಷಣವು ಅನುಭವಾತ್ಮಕವಾಗಿರಬೇಕು ಎಂದು ಅವರು ಹೇಳಿದರು.


ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಗೋವಿಂದ ಪ್ರಕಾಶ್ ಸಾಯ ಅವರು ಸಂಪನ್ಮೂಲ ವ್ಯಕ್ತಿಗಳಿಗೆ ಸ್ಮರಣಿಕೆಯಿತ್ತು ಗೌರವಿಸಿದರು. ಆಡಳಿತ ಮಂಡಳಿಯ ಸಂಚಾಲಕಿ ಡಾ. ಅಶ್ವಿನಿ ಕೃಷ್ಣಮೂರ್ತಿ ಅವರು ವಂದಿಸಿದರು. ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ರಮೇಶ ಎಂ. ಬಾಯಾರು, ಆಡಳಿತ ಮಂಡಳಿ ಸದಸ್ಯ ಗೋವಿಂದರಾಯ ಶೆಣೈ ಎ., ಜನತಾ ವಿದ್ಯಾಸಂಸ್ಥೆಗಳ ಮುಖ್ಯಸ್ಥರು, ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕನ್ನಡ ಅಧ್ಯಾಪಕ ಶಿವಕುಮಾರ್ ಸಾಯ ಅವರು ಸ್ವಾಗತಿಸಿ, ಪರಿಚಯಿಸಿ, ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top