ಮಂಗಳೂರು: ಮಂಗಳೂರು ಜಂಕ್ಷನ್- ಯಶವಂತಪುರ ನಡುವೆ ಚಲಿಸುವ ರೈಲು ಸಂಖ್ಯೆ 16576 ರ ಸಮಯವನ್ನು ರೈಲ್ವೇ ಸಚಿವಾಲಯವು ಮಾಡಿದ್ದು, ಪ್ರಯಾಣಿಕರ ಬಹುನಿರೀಕ್ಷಿತ ಬೇಡಿಕೆಯೊಂದು ಈಡೇರಿದೆ. ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಈ ಬಗ್ಗೆ ರೈಲ್ವೇ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮಂಗಳೂರಿಗೆ ಭೇಟಿ ನೀಡಿದ್ದಾಗ ಗಮನಕ್ಕೆ ತಂದಿದ್ದರು. ಅಲ್ಲದೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರವನ್ನೂ ಬರೆದಿದ್ದರು.
ಪ್ರಸ್ತುತ ಈ ರೈಲು ಬೆಳಗ್ಗೆ 11:30ಕ್ಕೆ ಮಂಗಳೂರು ಜಂಕ್ಷನ್ನಿಂದ ಹೊರಟು ರಾತ್ರಿ 8:45ಕ್ಕೆ ಯಶವಂತಪುರ ತಲುಪುತ್ತಿತ್ತು. ಕೆಲವೊಮ್ಮೆ ಅರ್ಧ-ಮುಕ್ಕಾಲು ಗಂಟೆ ವಿಳಂಬವಾಗಿ ತಲುಪುತ್ತಿತ್ತು.
ಸಂಸದರ ಪತ್ರವನ್ನು ಪುರಸ್ಕರಿಸಿದ ಸಚಿವಾಲಯವು ಈ ರೈಲಿನ ಸಮಯದಲ್ಲಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಬದಲಾವಣೆಯು ನವೆಂಬರ್ 1ರಿಂದ ಜಾರಿಗೆ ಬರಲಿದೆ.
ಪರಿಷ್ಕೃತ ಸಮಯದಂತೆ ಈ ರೈಲು ಬೆಳಗ್ಗೆ 7 ಗಂಟೆಗೆ ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಹೊರಡಲಿದೆ. ಸಂಜೆ 4:30ಕ್ಕೆ ಯಶವಂತಪುರ ತಲುಪಲಿದೆ. ಇದರಿಂದ ಮಂಗಳೂರು ಮತ್ತು ಬೆಂಗಳೂರು ನಡುವಿನ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಸಂಸದರ ಕಚೇರಿಯ ಪ್ರಕಟಣೆ ತಿಳಿಸಿದೆ.
ನಮ್ಮ ರೈಲ್ವೇ ಸಚಿವಾಲಯಕ್ಕೆ ಈ ವಿಷಯದ ಕುರಿತು ಮನವಿ ಮಾಡಿದ್ದೆ, ಅದರಂತೆ ಬಹುಕಾಲದಿಂದ ಬಾಕಿ ಉಳಿದಿರುವ ಬೇಡಿಕೆಯನ್ನು ಈಡೇರಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ, ರೈಲ್ವೆ ಸಚಿವ ಅಶ್ವಿನಿ ವೈಶ್ಣವ್ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಧನ್ಯವಾದಗಳು.
ಕ್ಯಾ| ಬ್ರಿಜೇಶ್ ಚೌಟ,
ಸಂಸದರು, ದಕ್ಷಿಣ ಕನ್ನಡ
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ