ನಿಟ್ಟೆ: ಅಂತರಂಗ ಶುದ್ಧಿ, ಸಂಪನ್ನತೆ ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಸ್ವಾಮಿ ಜಿತಕಾಮಾನಂದಜೀ

Upayuktha
0

ಸ್ವಾಮಿ ಜಿತಕಾಮಾನಂದಜೀ ಅವರಿಂದ ವಿಶೇಷ ಪ್ರವಚನ 


ನಿಟ್ಟೆ: ಪೂರ್ಣ ಪ್ರಮಾಣದ ವ್ಯಕ್ತಿತ್ವ ವಿಕಸನ ಅಂತರಂಗ ಶುದ್ದಿ, ಚಿತ್ತ ನಿಯಂತ್ರಣದಿಂದ ಸಾಧ್ಯ. ಬಾಹ್ಯವಿದ್ಯೆಗಳನ್ನು ಬಯಸಿದಾಗ ಪಡೆಯಬಹುದು. ಆದರೆ ಆಂತರ್ಯದ ಉದ್ದೀಪನ, ಚಿತ್ತ ನಿಯಂ ತ್ರಣ, ಭಾವ ಶುದ್ದಿ ವಿದ್ಯಾರ್ಥಿಗಳ ಪೂರ್ಣ ಪ್ರಮಾಣದ  ವ್ಯಕ್ತಿತ್ವ ವಿಕಸನಕ್ಕೆ ಆಧಾರವಾಗಿ ಕಾರ್ಯನಿರ್ವಹಿಸುತ್ತವೆ. ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದರ ಚಿಂತನೆಯನ್ನು ಆಧರಿಸಿ ವಿದ್ಯಾರ್ಥಿಗಳು ತಮ್ಮಲ್ಲಿ ಹುದುಗಿರುವ ಅಗಾಧ ಶಕ್ತಿಯನ್ನು ಉದ್ಧೀಪನಗೊಳಿಸಿ ಈ ಭವ್ಯ ಭಾರತದ ಉತ್ತಮ ಪ್ರಜೆಗಳಾಗಿ ದೇಶದ ಭವಿಷತ್ತಿನ ಉತ್ತಮ ನಾಯಕರಾಗಬೇಕು ಎಂದು ಮಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ ಅಭಿಪ್ರಾಯಪಟ್ಟರು.


ಅವರು ನಿಟ್ಟೆಯ ಪ್ರತಿಷ್ಠಿತ ಜಸ್ಟೀಸ್ ಕೆ ಎಸ್ ಹೆಗ್ಡೆ ಉದ್ಯಮಾಡಳಿತ (ಎಂ.ಬಿ.ಎ) ಸಂಸ್ಥೆಯ 27ನೇ ಬ್ಯಾಚ್ ಓರಿಯೆಂಟೇಷನ್ ಕಾರ್ಯಕ್ರಮದ ತರಬೇತಿಯಲ್ಲಿ ಪಾಲ್ಗೊಂಡು "ವ್ಯಕ್ತಿತ್ವ ವಿಕಸನದಲ್ಲಿ ಸ್ವಾಮಿ ವಿವೇಕಾನಂದರ ಚಿಂತನೆಗಳ ಸಾರಸಂಗ್ರಹವನ್ನು ವಿಶ್ಲೇಷಿಸಿ" ಎಂ.ಬಿ.ಎ ವಿದ್ಯಾರ್ಥಿಗಳಿಗೆ ವಿಶೇಷ ಪ್ರವಚನ ನೀಡಿದರು.


ಮೌಲ್ಯಯುತ, ತತ್ವಾಧಾರಿತ ಉತ್ಕೃಷ್ಟ ಶಿಸ್ತುಬದ್ಧ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನಿಟ್ಟೆಯ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಶ್ರೀ ವಿನಯ ಹೆಗ್ಡೆಯವರ ಮಾರ್ಗದರ್ಶನದಲ್ಲಿ ನೀಡುವ ರೀತಿಯನ್ನು ಶ್ಲಾಘಿಸಿದರು. ಪ್ರವಚನದ ಬಳಿಕ ಪ್ರಶ್ನೋತ್ತರ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಪ್ರಾಧ್ಯಾಪಕ ಡಾ. ಸುಧೀರ್ ರಾಜ್ ಕೆ ಮತ್ತು ಪ್ರೊ. ಕಾರ್ತಿಕ್ ಕುದ್ರೋಳಿ ನಿರ್ವಹಿಸಿದರು. ಸಂಸ್ಥೆಯ ಪ್ರಭಾರ ನಿರ್ದೇಶಕ ಡಾ. ಸುಧೀರ್ ಎಂ ಅವರು ಸ್ವಾಮೀಜಿಯವರನ್ನು ಗೌರವಿಸಿದರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 




Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top