ಪುಂಜಾಲಕಟ್ಟೆ-ಚಾರ್ಮಾಡಿ ರಾ.ಹೆದ್ದಾರಿ ಕಾಮಗಾರಿಗೆ ಚುರುಕು ಮುಟ್ಟಿಸಿದ ಸಂಸದರು

Upayuktha
0

ಮಂಗಳೂರು: ಪುಂಜಾಲಕಟ್ಟೆ– ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಟುತ್ತಾ ಸಾಗಿದ್ದು ಇದರಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಯನ್ನು ಮನಗಂಡು ಇದನ್ನು ಬಗೆಹರಿಸಲು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸಕರಾದ ಹರೀಶ್ ಪೂಂಜ ಅವರು ಜೊತೆ ಸೇರಿ ಎರಡು ತಿಂಗಳುಗಳಿಂದ ನಿರಂತರ ಸಭೆಗಳನ್ನು ನಡೆಸಿದ್ದರು.


ಇದಕ್ಕೆ ಫಲಶೃತಿ ದೊರಕಿದ್ದು ಇದೀಗ ರಾಷ್ಟ್ರೀಯ ಹೆದ್ದಾರಿಯ ಬ್ಯಾಕ್ ಟು ಬ್ಯಾಕ್ ಮಾದರಿಯ ಅಡಿಯಲ್ಲಿ ಕಾಮಗಾರಿಯನ್ನು ಗುತ್ತಿಗೆದಾರರಾದ ಡಿ.ಪಿ ಜೈನ್‌ ಅವರಿಂದ ಮುಗ್ರೋಡಿ ಕನ್‌ಸ್ಟ್ರಕ್ಷನ್‌ಗೆ ವಹಿಸಲಾಗಿದೆ‌.


ನೂತನ ಗುತ್ತಿಗೆದಾರರು ಇಂದು ಬೆಳ್ತಂಗಡಿಯ ಕಾಶಿಬೆಟ್ಟುವಿನಲ್ಲಿ ಕಾಮಗಾರಿ ಪ್ರಾರಂಭಗೊಳಿಸಿದ್ದು ಇದಕ್ಕೆ ಸಂಸದರು ಮತ್ತು ಶಾಸಕರು ಚಾಲನೆ ನೀಡುವುದರ ಜೊತೆಗೆ ಕಾಮಗಾರಿಯ ಪರಿಶೀಲನೆ ನಡೆಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top