ಮಣಿಪಾಲ: ಮಾಹೆಯ ಎಂ.ಐ.ಸಿ ಕ್ಯಾಂಪಸ್ನಲ್ಲಿರುವ ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿ ಪಂಚಾಯತ್ ರಾಜ್ ಸಚಿವಾಲಯ ಭಾರತ ಸರ್ಕಾರ ಮತ್ತು ಕಮ್ಯುನಿಟಿ ರೇಡಿಯೊ ಅಸೋಸಿಯೇಶನ್, ನವದೆಹಲಿ ಸಹಯೋಗದಲ್ಲಿ ಜನರೆಡೆಗೆ ಜ್ಞಾನವಾಹಿನಿ ಸರಣಿ ಕಾರ್ಯಕ್ರಮ ಪ್ರಸಾರ ಮಾಡಲಿದೆ. ಈ ಸರಣಿಯ 1 ನೇ ಸಂಚಿಕೆಯಲ್ಲಿ ಗ್ರಾಮಪಂಚಾಯತ್ ನ ಸುಸ್ಥಿರತೆ ಕುರಿತು ಪ್ರಹಸನ ಮತ್ತು ಸಂದರ್ಶನ ಪ್ರಸಾರವಾಗಲಿದೆ. ಇದು ಆಗಸ್ಟ್ ತಿಂಗಳ ದಿನಾಂಕ 15 ರಂದು ಗುರುವಾರ ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ.
ಈ ಕಾರ್ಯಕ್ರಮದಲ್ಲಿ ಪ್ರಿಯಾ, ಕೃತಿ ಅಮ್ಮೆಂಬಳ, ಶೆಟ್ಟಿ ದೇವಿಪ್ರಸಾದ್ ಕೆಮ್ಮಣ್ಣು, ಸಾಧುಹಾಂಡ ನಂದಗೋಕುಲ, ಸುಲೋಚನ ಪಚ್ಚಿನಡ್ಕ ಮತ್ತು ಕಾಡೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಕೆ.ಪಾಲ್ಗೊಳ್ಳಲಿದ್ದಾರೆ. ಆಗಸ್ಟ್ 16 ರಂದು ಮಧ್ಯಾಹ್ನ 2 ಗಂಟೆಗೆ ಇದರ ಮರುಪ್ರಸಾರವಿರುವುದು.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ