ಉಜಿರೆಯಲ್ಲಿ ಕೆಸರಲ್ಲಿ ಕಸರತ್ತು- ವಿಶೇಷ ಸ್ಪರ್ಧೆಗಳ ಆಯೋಜನೆ

Upayuktha
0


ಉಜಿರೆ: ಬೇಸಾಯ ಕಾಲದಲ್ಲಿ ಕರಾವಳಿ ಜನರಿಗೆ ಉತ್ಸವ ಕಾಲ. ಇಲ್ಲಿನ ಜನರು ಗದ್ದೆಗಳಲ್ಲಿ ತಮ್ಮ ಬಹುತೇಕ ಜೀವನ ಕಾಣುವವರು. ಇಂತಹ ಗದ್ದೆಗಳಲ್ಲಿ ಹಿಂದಿನ ಆಟೋಟಗಳು ಮರೆಯಾಗುತ್ತಿವೆ. ಅನೇಕ ಚರ್ಮರೋಗಗಳಿಗೆ ಕೆಸರು ಔಷಧವಾಗಿದೆ. ಈಗಿನ ಕಾಲದ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳ ಮೂಲಕವಾದರೂ ಕೆಸರಿನ ಪರಿಚಯ ಆಗುತ್ತಿರುವುದು ಸಂತೋಷದಾಯಕ ವಿಚಾರ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅವರು ಹೇಳಿದರು. 


ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಉಜಿರೆಯ ಪೆರ್ಲದ ಕೆಸರು ಗದ್ದೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ನಡೆದ ಕೆಸರಿನಲ್ಲಿ ಕಸರತ್ತು ಸ್ಪರ್ಧಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 


ಸ್ಥಳೀಯ ಪ್ರಗತಿಪರ ಕೃಷಿಕ ರಾಮಣ್ಣ ನಾಯ್ಕ್ ಸ್ಪರ್ಧೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೆಸರು ಗದ್ದೆ ಆಟೋಟಗಳಿಗೆ ಸಂಬಂಧಿಸಿದ ವಿಶೇಷವಿರುವ ಭಿತ್ತಿಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. 


ಕೆಸರು ಗದ್ದೆಯಲ್ಲಿ ಓಟ, ಉಪ್ಪು ಮೂಟೆ, ಸೋಗೆ ಎಳೆಯುವುದು, ಹಗ್ಗ ಜಗ್ಗಾಟ, ವಾಲಿಬಾಲ್ ಮುಂತಾದ ಅನೇಕ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. 


ರಾ.ಸೇ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ಸಹ ಕಾರ್ಯಕ್ರಮಾಧಿಕಾರಿ ಪದ್ಮಶ್ರೀ ರಕ್ಷಿತ್, ಹಿರಿಯ ಸ್ವಯಂ ಸೇವಕರಾದ ಧನುಷ್ ಕೆ.ಪಿ, ಶಶಿರಾಜ್, ಭರತ್ ಕೆ, ಸಾಯಿ ಕಿರಣ್, ಭರತ್ ರಾವ್, ವೀರೇಶ್ ಮುಂತಾದವರು ಉಪಸ್ಥಿತರಿದ್ದರು. 


ಸ್ವಯಂ ಸೇವಕಿ ಅಂಜನಾ ಸ್ವಾಗತಿಸಿದರು. ಘಟಕದ ನಾಯಕಿ ಪ್ರಾಪ್ತಿ ಗೌಡ ನಿರೂಪಿಸಿ, ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top